ನವೆಂಬರ್​​​ 16ಕ್ಕೆ ‘ಪುನೀತ್​ ನಮನ’ ಕಾರ್ಯಕ್ರಮ

Webdunia
ಬುಧವಾರ, 3 ನವೆಂಬರ್ 2021 (20:53 IST)
ಬೆಂಗಳೂರು:  ದಿವಂಗತ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆಯ ನೋವನ್ನು ಚಿತ್ರರಂಗ ತಡೆದುಕೊಳ್ಳಲು ಆಗುತ್ತಿಲ್ಲ ಈ ನಡುವೆಯೂ ಕರ್ನಾಟಕ ವಾಣಿಜ್ಯ  ಮಂಡಳಿ ಹಾಗೂ ನಿರ್ಮಾಪಕರ ಸಂಘ ಜಂಟಿಯಾಗಿ ಪುನೀತ್ ನಮನ ಎನ್ನುವ  ಕಾರ್ಯಕ್ರಮವನ್ನು ನೆಡೆಸಿಕೊಡಲು ಮುಂದಾಗಿದೆ. 
 
ದಿವಂಗತ ನಟ ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಅಕಾಲಿಕ ಮರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ  ಹಿನ್ನೆಲೆಯಲ್ಲಿ ನವೆಂಬರ್​​​ 16ಕ್ಕೆ ‘ಪುನೀತ್​ ನಮನ’ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ  ಕಾರ್ಯಕ್ರಮ ಪ್ಯಾಲೆಸ್ ಗ್ರೌಂಡ್ ನ ಒಳಾಂಗಣ ವೇದಿಕೆಯಲ್ಲಿ ನಡೆಯಲಿದೆ ಎಂದು ವಾಣಿಜ್ಯ ಮಂಡಳಿಯ ಮೂಲಗಳು ತಿಳಿಸಿವೆ. 
 
ಬೃಹತ್​​ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವಾಣಿಜ್ಯ ಮಂಡಳಿ ಆಹ್ವಾನ ಪತ್ರಿಕೆ ನೀಡಲು ತಯಾರಿ ನೆಡೆಸಿದೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.​ವೈ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸೇರಿ ಹಲವರಿಗೆ ಆಮಂತ್ರಣ ನೀಡಲಿದೆ.  ದಕ್ಷಿಣ ಭಾರತದ  ಕಲಾವಿದರು, ತಂತ್ರಜ್ಞರಿಗೂ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಆಂಧ್ರ ಹಾಗೂ ತಮಿಳುನಾಡಿನ ಫಿಲ್ಮ್ ಚೇಂಬರ್ ಪದಾಧಿಕಾರಿಗಳು, ಕಲಾವಿದರು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments