Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಹೆಸರಿನಲ್ಲೇ ಎಂಥಾ ಶಕ್ತಿ: 10 ಜನರ ಪ್ರಾಣ ಉಳಿಸಿದ ಅಪ್ಪು

Krishnaveni K
ಬುಧವಾರ, 3 ಜುಲೈ 2024 (10:19 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ತೀರಿಕೊಂಡಾಗ ಅವರ ಗೌರವಾರ್ಥ ಸರ್ಕಾರ ಜಾರಿಗೆ ತಂದ ಹೃದಯ ಜ್ಯೋತಿ ಯೋಜನೆ ಈಗ 10 ಜನರ ಪ್ರಾಣ ಉಳಿಸಿದೆ. ದೈಹಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ ಅಪ್ಪು ಹೆಸರಿನಲ್ಲಿ ಕೆಲವರ ಪ್ರಾಣ ಉಳಿಯುತ್ತಿದೆ ಎಂಬುದೇ ಅಭಿಮಾನಿಗಳಿಗೆ ಹೆಮ್ಮೆ.

ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಮೊದಲನೇ ಹಂತದಲ್ಲಿ ಹಬ್ ಸ್ಟೋಕ್ ಮಾದರಿಯನ್ನು ಜಯದೇವ ಹೃದ್ರೋಗ ಸಂಸ್ಥೆಯ ಸಹಯೋಗದೊಂದಿಗೆ 45 ಆಸ್ಪತ್ರೆಗಳಲ್ಲಿ ಜಾರಿಗೊಳಿಸಲಾಗಿತ್ತು. ಕಳೆದ ಮಾರ್ಚ್ ನಿಂದ ಈ ಯೋಜನೆಯಡಿಯಲ್ಲಿ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಲಭ್ಯವಾಗಿದೆ.  ಈ ಚುಚ್ಚು ಮದ್ದನ್ನು ಇದುವರೆಗೆ 10 ಜನರಿಗೆ ನೀಡಿ ಜೀವ ಉಳಿಸಲಾಗಿದೆ.

ಎದೆನೋವು ಕಾಣಿಸಿಕೊಂಡವರು ತಕ್ಷಣವೇ ಸ್ಟೋಕ್ ಕೇಂದ್ರಗಳಿಗೆ ಭೇಟಿ ನೀಡಿದಾಗ 6 ನಿಮಿಷದೊಳಗೆ ಅವರ ಸ್ಥಿತಿ ಗತಿಯನ್ನು ಎಐ ತಂತ್ರಜ್ಞಾನದಿಂದ ಪತ್ತೆ ಹಚ್ಚಲಾಗುತ್ತದೆ. ಆ ಸಂದರ್ಭದಲ್ಲಿ ಹೃದಯಾಘಾತವಾಗುವ ಸೂಚನೆ ಇಸಿಜಿ ಪರೀಕ್ಷೆಯಲ್ಲಿ ಕಂಡುಬಂದರೆ ತಕ್ಷಣವೇ ಚಿಕಿತ್ಸೆ ಕೊಡಲಾಗುತ್ತದೆ.

ಈ ಯೋಜನೆಗೆ ಪುನೀತ್ ರಾಜ್ ಕುಮಾರ್ ಹೆಸರು ನೀಡಲಾಗಿತ್ತು. ಈ ಯೋಜನೆಯ ಮೊದಲ ಹಂತದಲ್ಲಿ ಈಗ 10 ಜನರ ಪ್ರಾಣ ಉಳಿಸಲಾಗಿದೆ. ಈ ಒಂದು ಚುಚ್ಚು ಮದ್ದಿನ ಬೆಲೆ 25 ಸಾವಿರ ರೂ. ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾಗಿ ಗೋಲ್ಡನ್ ಅವರ್ ನಲ್ಲಿ ಈ ಚುಚ್ಚು ಮದ್ದು ನೀಡಿದರೆ ಜೀವ ಉಳಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments