Webdunia - Bharat's app for daily news and videos

Install App

ಸಂಸ್ಕೃತ ಕಲಿಯದಿದ್ದರೆ ಸತ್ತ ಮೇಲೆ ಸ್ವರ್ಗಕ್ಕೆ ಟಿಕೆಟ್ ಸಿಗಲ್ಲ: ಪುತ್ತಿಗೆ ಶ್ರೀಗಳ ವಿವಾದಿತ ಹೇಳಿಕೆ

Krishnaveni K
ಸೋಮವಾರ, 2 ಸೆಪ್ಟಂಬರ್ 2024 (13:53 IST)
ಉಡುಪಿ: ಶ್ರೀಕಷ್ಣಾಷ್ಠಮಿ ಕಾರ್ಯಕ್ರಮದ ಭಾಷಣದಲ್ಲಿ ಸಂಸ್ಕೃತ ಕಲಿಯದಿದ್ದರೆ ಸತ್ತ ಮೇಲೆ ಸ್ವರ್ಗಕ್ಕೆ ಟಿಕೆಟ್ ಸಿಗ ಲ್ಲ ಎಂದಿರುವ ಪುತ್ತಿಗೆ ಶ್ರೀಗಳ ಹೇಳಿಕೆ ಈಗ ಭಾರೀ  ವಿವಾದಕ್ಕೆ ಕಾರಣವಾಗಿದೆ.

ಪುತ್ತಿಗೆ ಶ್ರೀಗಳ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಂಸ್ಕೃತ ಎಲ್ಲಾ ಭಾಷೆಗಳ ತಾಯಿ, ಉಳಿದೆಲ್ಲಾ ಭಾಷೆಗಳು ಪ್ರಾದೇಶಿಕ ಭಾಷೆಗಳು. ಸಂಸ್ಕೃತ ದೇವನಗರಿ ಭಾಷೆ. ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು ಎಂದು ಪುತ್ತಿಗೆ ಶ್ರೀಗಳು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಸಂಸ್ಕೃತ ಶ್ರೇಷ್ಠ ಮತ್ತು ಪಾವನ ಭಾಷೆ. ದೇವರ ಎಲ್ಲಾ ಶ್ಲೋಕಗಳು ಸಂಸ್ಕೃತದಲ್ಲಿ ಇವೆ. ಇದು ಪರಲೋಕದ ಭಾಷೆಯೂ ಹೌದು. ಹೀಗಾಗಿ ನಾವು ಸತ್ತ ಮೇಲೆ ಪರಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು ಎಂದಿದ್ದರು. ಉಳಿದಂತೆ ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ. ಆಂಗ್ಲ ಭಾಷೆಗೂ ಸಂಸ್ಕೃತವೇ ಮೂಲ.

ಸಂಸ್ಕೃತ ಅಂತರ್ಲೋಕೀಯ ಭಾಷೆ. ಸಂಸ್ಕೃತ ಭಾಷೆ ತಿಳಿಯದಿದ್ದರೆ ದೇವಲೋಕಕ್ಕೆ ವೀಸಾ ಸಿಗುವುದಿಲಲ್ಲ. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ಪುತ್ತಿಗೆ ಶ್ರೀಗಳು ಹೇಳಿದ್ದು ಸರಿಯಾಗಿದೆ. ಅವರ ಹೇಳಿಕೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದಿದ್ದಾರೆ. ಮತ್ತೆ ಕೆಲವರು ದೇವರಿಗೆ ಯಾವ ಭಾಷೆಯೂ ಅನ್ವಯವಾಗುವುದಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments