Publish Date: Tue, 04 Jun 2019 (11:43 IST)
Updated Date: Tue, 04 Jun 2019 (19:43 IST)
ಬೆಂಗಳೂರು : ದೇವೇಗೌಡರ ಕುಟುಂಬ ರಾಜಕೀಯ ನಿವೃತ್ತಿ ಪಡೆಯಲಿ ಎಂಬ ಶೋಭಾ ಕರಂದ್ಲಾಜೆ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ನೀಡಿದ್ದಾರೆ.
ಶಿಕಾರಿಪುರ ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಮೊದಲು ಯಡಿಯೂರಪ್ಪನವರಿಂದ ರಾಜೀನಾಮೆ ಕೊಡಿಸಲಿ ಎಂದು ಶೋಭಾ ಕರಂದ್ಲಾಜೆಗೆ ಪುಟ್ಟರಾಜು ಸವಾಲು ಹಾಕಿದ್ದಾರೆ.
ಹಾಗೇ ಚಿಕ್ಕಬಳ್ಳಾಪುರದಂತೆ ಮಂಡ್ಯ ಮರೀತಾರ ಸಿಎಂ ಅನ್ನೋ ವಿಚಾರದ ಬಗ್ಗೆ ಮಾತನಾಡಿದ ಅವರು, ಸಿಎಂ ಯಾವ ಕಾರಣಕ್ಕೂ ಮಂಡ್ಯ ಜಿಲ್ಲೆಯನ್ನು ಮರೆಯಲ್ಲ ಹಾಗೇ ಮಂಡ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಹಿಂಪಡೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ಕೊಟ್ಟ ಅನುದಾನಕ್ಕಿಂತ ಹೆಚ್ಚು ಅನುದಾನ ಕೊಡ್ತಾರೆ. ಯಾವುದೇ ವದಂತಿ, ಗಾಸಿಪ್ ಗಳಿಗೆ ಕಿವಿಗೊಡಬೇಡಿ ಸಿಎಂ ತಮ್ಮ ಕಾರ್ಯವೈಖರಿಯ ವೇಗ ಹೆಚ್ಚಿಸಿಕೊಂಡಿದ್ದಾರೆ. ಇನ್ಮುಂದೆ ಸಿಎಂ ಕಾರ್ಯವೈಖರಿ ಬದಲಾಗಲಿದೆ ಎಂದು ಹೇಳಿದ್ದಾರೆ.
pavithra
Publish Date: Tue, 04 Jun 2019 (11:43 IST)
Updated Date: Tue, 04 Jun 2019 (19:43 IST)