ಪುಂಡರಿಗೆ ಖಡಕ್ ಡೆಡ್‌ಲೈನ್‌?

Webdunia
ಬುಧವಾರ, 20 ಏಪ್ರಿಲ್ 2022 (08:16 IST)
ಹುಬ್ಬಳ್ಳಿ : ನಾಪತ್ತೆಯಾಗಿರುವ ವಾಸೀಂ ಸೇರಿ 8 ಆರೋಪಿಗಳಿಗೆ ಪೊಲೀಸರು ಡೆಡ್ಲೈನ್ ನೀಡಿದ್ದಾರೆ.

ಇಂದು ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಂತಿ ಕದಡಿದ ಆರೋಪಿಗಳ ಪತ್ತೆಗೆ ಪೊಲೀಸರು ಬೆಳಗಾವಿ, ಹಾವೇರಿ, ಹೈದರಾಬಾದ್ಗೆ ತೆರಳಿದ್ದಾರೆ. ಗಲಭೆಗೆ 4 ಮಂದಿ ಪ್ರಚೋದನೆ ನೀಡಿದ್ದು ಇವರೇ ಗಲಭೆಗೆ ನೇರ ಕಾರಣ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ.

ಹುಬ್ಬಳ್ಳಿ ಗಲಭೆಕೋರರ ಬಂಧನಕ್ಕೆ ಖಾಕಿಪಡೆ ತೀವ್ರಶೋಧಕಾರ್ಯ ನಡೆಸುತ್ತಿದೆ. ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಸಹ ಏರಿಕೆಯಾಗುತ್ತಿದೆ. ಇದಕ್ಕೆ ರಾಜಕೀಯ ರೂಪ ಬೆರೆತಿದ್ದು, ಬಂಧಿತರಲ್ಲಿ ಅಮಾಯಕರಿದ್ದಾರೆ ಎಂದು ರಾಜಕೀಯ ನಾಯಕರು ಮತ್ತು ಕುಟುಂಬಸ್ಥರು ಹೇಳುತ್ತಿದ್ದಾರೆ.

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಅಮಾಯಕರ ಪತ್ತೆಗೂ ಸಹ ಹಲವಾರು ಮಾರ್ಗಗಳನ್ನು ಪ್ಲಾನ್ ಮಾಡಿದೆ. ಈವರೆಗೆ 108 ಮಂದಿ ಬಂಧಿತರಾಗಿದ್ದು ಅವರಲ್ಲಿ ಅಮಾಯಕರನ್ನು ಬಿಡುಗಡೆ ಮಾಡಲು ಸಿಸಿಟಿವಿ ಮತ್ತು ಮೊಬೈಲ್ ವಿಡಿಯೋ ಮೂಲಕ 4 ಫಾರ್ಮುಲಾವನ್ನು ಪೊಲೀಸರು ಅಳವಡಿಸಿಕೊಂಡಿದ್ದಾರೆ.

ಗಲಾಟೆಯ ದಿನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಭಾಗಿಯಾದವರು. ಘಟನೆ ನೋಡುತ್ತಾ ನಿಂತವರು, ಪೊಲೀಸರ ಲಾಠಿ ಚಾರ್ಜ್ ವೇಳೆ ಓಡಿಹೋದವರು ಪತ್ತೆಯಾಗಿದ್ದು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಹೀಗಾಗಿ ಇವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments