ಕ್ವಾರಂಟೈನ್ ಬಿಟ್ಟು ಹೊರ ಬಂದರೆ ಜೈಲು ಫಿಕ್ಸ್

Webdunia
ಬುಧವಾರ, 6 ಮೇ 2020 (15:29 IST)
ಹೋಮ್ ಕ್ವಾರಂಟೈನ್ ಬಿಟ್ಟು ಹೊರ ಬಂದರೆ ಜೈಲಿಗೆ ತಳ್ಳೋದು ಫಿಕ್ಸ್.

ಭಟ್ಕಳದಲ್ಲಿ ಕರೋನಾ ಸೋಂಕು ಹರಡದಂತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು  ಪಶ್ವಿಮವಲಯ ಡಿಐಜಿ ದೇವಜ್ಯೋತಿ ರಾಯ್ ಹೇಳಿದ್ದಾರೆ.

ಭಟ್ಕಳದಲ್ಲಿ ಪೊಲೀಸ್ ಬಂದೋಬಸ್ತ್ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರು ತಮ್ಮ ಮಾಹಿತಿಯನ್ನು ಕಡ್ಡಾಯವಾಗಿ ತಾಲೂಕು ಆಡಳಿತಕ್ಕೆ ತಿಳಿಸಬೇಕು. ಅಲ್ಲದೇ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದು ಸಹಕರಿಸಬೇಕು. ಒಂದೊಮ್ಮೆ ಅನಗತ್ಯವಾಗಿ ಸಾರ್ವಜನಿಕರ  ಸಂಪರ್ಕ ಬಂದರೆ ಅಂಥವನ್ನು ಜೈಲಿಗೆ ತಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಅವಶ್ಯಕ  ಮಾಹಿತಿಯನ್ನು ನೀಡಬೇಕು. ಒಂದೊಮ್ಮೆ ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಆಶಾ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಅಂಥವರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಬಿ ಶ್ರೀರಾಮುಲು

ಇರಾನ್‌ನ ಪರಮೋಚ್ಛ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ಜಲಜೀವನ್ ಮಿಷನ್ ಸ್ಟ್ಯಾಂಪ್ ಪೇಪರ್ ವಿಚಾರದಲ್ಲಿ ಅಕ್ರಮ: ಡಿಎನ್ ಜೀವರಾಜ್

ಅಡುಗೆ ಮಾಡಲು ಅವಕಾಶ ಕೊಡದ ಅತ್ತೆ, ಸೊಸೆ ತೆಗೆದುಕೊಂಡ ನಿರ್ಧಾರ ಕೇಳಿದ್ರೆ ಶಾಕ್‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments