Webdunia - Bharat's app for daily news and videos

Install App

ಎಸ್ಪಿ ಬೆಂಬಲದಿಂದ ವಿನಯ್ ಸೋಮಣ್ಣಗೆ ಕಿರುಕುಳ: ಆರ್.ಅಶೋಕ್ ಆರೋಪ

Krishnaveni K
ಶುಕ್ರವಾರ, 4 ಏಪ್ರಿಲ್ 2025 (17:46 IST)
ಬೆಂಗಳೂರು: ‘ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರಿಗೆ ನಿರಂತರವಾಗಿ ಕಾಂಗ್ರೆಸ್ಸಿನ ಎಂಎಲ್‍ಎಗಳ ಆಪ್ತ ತನ್ನೀರ್ ಮೈನಾ ಅವರು ಅಲ್ಲಿನ ಎಸ್‍ಪಿ ಬೆಂಬಲದಿಂದ ಕಿರುಕುಳ ಕೊಡಲಾಗುತ್ತಿತ್ತು. ಈ ಸಾವಿಗೆ ಈ ಮೂರು ಜನ ಮತ್ತು ಎಸ್‍ಪಿ ನೇರ ಕಾರಣ’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ.

ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯರವರು ಅಕಾಲಿಕ  ನಿಧನರಾಗಿದ್ದು, ಅವರಿಗೆ ಅಂತಿಮ ನಮನ ಸಲ್ಲಿಸಲು ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಸೋಷಿಯಲ್ ಮೀಡಿಯದ ಒಂದು ಪೋಸ್ಟನ್ನು ಫಾರ್ವರ್ಡ್ ಮಾಡಿದ್ದಕ್ಕೆ ಕಿರುಕುಳ ಕೊಡಲಾಗಿದೆ. ಇದಕ್ಕೆ ದಾಖಲೆಗಳಿವೆ; ಡೆತ್ ನೋಟಿನಲ್ಲೂ ತಿಳಿಸಿದ್ದಾರೆ’ ಎಂದರು.

‘ಎಂಎಲ್‍ಎ ಕೂಡ ಧಮ್ಕಿ ಹಾಕಿದ್ದಾರೆ. ವಿನಯ್ ಅವರು ಹೈಕೋರ್ಟಿನಲ್ಲಿ ಜಾಮೀನು ಪಡೆದಿದ್ದಾರೆ. ಅವರ ಬೆಂಗಳೂರು ಮನೆಗೂ ಪೊಲೀಸರು ಬಂದಿದ್ದರು’ ಎಂದು ಟೀಕಿಸಿದರು. ‘ಪೊಲೀಸ್ ಸ್ಟೇಷನ್‍ಗಳನ್ನು ಕಾಂಗ್ರೆಸ್ ಕಚೇರಿ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆ ಒತ್ತಡ ಹೇರುತ್ತಾರೆ. ಈ ಮೂಲಕ ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಲಾಗುತ್ತಿದೆ’ ಎಂದು ಆಕ್ಷೇಪಿಸಿದರು.
‘ಮುಂದಿನ ಹೋರಾಟದ ಕುರಿತು ಪಕ್ಷದ ಮುಖಂಡರ ಜೊತೆಗೂಡಿ ಚರ್ಚಿಸಿ ತೀರ್ಮಾನಿಸುತ್ತೇವೆ. ಯಾವುದೇ ಕಾರಣಕ್ಕೂ ಅವರ ಕುಟುಂಬದ ಜೊತೆ ನಾವಿದ್ದೇವೆ. ಅವರಿಗೆ ನ್ಯಾಯ ಕೊಡಿಸುತ್ತೇವೆ’ ಎಂದು ತಿಳಿಸಿದರು.

‘ತನ್ನೀರ್ ಮೈನಾ, ಪೊನ್ನಣ್ಣ, ಮಂಥರ್ ಗೌಡ ಅವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದ ಅವರು, ‘ಕೊಡಗಿನಲ್ಲಿ ಪ್ರತಿಭಟನೆ ಮಾಡಲಿದ್ದೇವೆ’ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಈ ಸಂದರ್ಭದಲ್ಲಿ ಇದ್ದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments