Webdunia - Bharat's app for daily news and videos

Install App

ಮುಡಾ ಹಗರಣದಲ್ಲಿರುವ ಆರೋಪಿಗಳ ಪಾಸ್‌ಪೋರ್ಟ್‌ ರದ್ದು ಮಾಡಲು ಆರ್‌.ಅಶೋಕ್ ಒತ್ತಾಯ

Sampriya
ಶನಿವಾರ, 19 ಅಕ್ಟೋಬರ್ 2024 (18:17 IST)
ಬೆಂಗಳೂರು: ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಬೇಕೆಂದು ವಿಪಕ್ಷ ನಾಯಕ ಆರ್‌ ಅಶೋಕ್ ಒತ್ತಾಯ ಮಾಡಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಹಾಕಿಕೊಂಡಿದ್ದಾರೆ.  ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ.

ಈ ನಿಟ್ಟಿನಲ್ಲಿ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು @dir_ed ಹಾಗು @DgpKarnataka
 ಅವರಲ್ಲಿ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments