Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಬಿಜೆಪಿ ಸೇರ್ಪಡೆ ವದಂತಿ ಎಲ್ಲಾ ನಾನು ಕೊಟ್ಟ ಮುಹೂರ್ತದ ಪರಿಣಾಮ: ಆರ್ ಅಶೋಕ್

Krishnaveni K
ಗುರುವಾರ, 27 ಫೆಬ್ರವರಿ 2025 (14:54 IST)
ಬೆಂಗಳೂರು: ಡಿಕೆ ಶಿವಕುಮಾರ್ ಬಿಜೆಪಿ ಸೇರ್ಪಡೆ ವದಂತಿ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು ನಾನು ಕೊಟ್ಟ ಮುಹೂರ್ತದ ಪರಿಣಾಮವೇ ಇದು ಎಂದಿದ್ದಾರೆ.

ಇತ್ತೀಚೆಗೆ ಕುಂಭಮೇಳಕ್ಕೆ ಹೋಗಿ ಅಲ್ಲಿನ ಆಯೋಜನೆ ಬಗ್ಗೆ ಡಿಕೆ ಶಿವಕುಮಾರ್ ಹೊಗಳಿದ್ದಾರೆ. ನಾನು ಹಿಂದೂ ಧರ್ಮವನ್ನು ಪಾಲಿಸುತ್ತೇನೆ ಎಂದಿದ್ದರು. ನಿನ್ನೆಯಷ್ಟೇ ಅಮಿತ್ ಶಾ ಜೊತೆಗೂ ವೇದಿಕೆ ಹಂಚಿಕೊಂಡಿದ್ದರು.

ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಿಜೆಪಿ ಸೇರ್ಪಡೆ ವದಂತಿಗಳು ಹಬ್ಬಿವೆ. ಇದರ ಬಗ್ಗೆ ಇಂದು ಆರ್ ಅಶೋಕ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ‘ನಾನು ಡಿಕೆ ಶಿವಕುಮಾರ್ ಭವಿಷ್ಯ ಹೇಳುವಷ್ಟು ದೊಡ್ಡವನಲ್ಲ. ನಾನು ಸತ್ಯ ಹೇಳುತ್ತೇನೆ ಅಷ್ಟೇ. ನವಂಬರ್ 16 ಕ್ಕೆ ಸಿಎಂ ಬದಲಾವಣೆ ಬಗ್ಗೆ ಈ ಮೊದಲೇ ಮುಹೂರ್ತ ಇಟ್ಟಿದ್ದೆ. ಇದೆಲ್ಲವೂ ಅದರ ಮುನ್ನುಡಿ ಅಷ್ಟೇ’ ಎಂದಿದ್ದಾರೆ.

ಹಾಗಿದ್ದರೆ ಡಿಕೆ ಶಿವಕುಮಾರ್ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೀರಾ ಎಂದು ಅಶೋಕ್ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು ‘ನೋಡೋಣ. ಮೊದಲು ಅವರನ್ನು ಕಾಂಗ್ರೆಸ್ ನವರು ಹೊರಗೆ ಹಾಕಲಿ. ಆಗ ನೋಡೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments