Webdunia - Bharat's app for daily news and videos

Install App

ಟ್ಯಾಂಗರ್‌ ಮಾಫಿಯಾಗೆ ಶರಣಾದ ಸರ್ಕಾರ: ಜನರಿಂದ ಹಣ ಸುಲಿಗೆ ಎಂದ ಆರ್.ಅಶೋಕ್

Sampriya
ಮಂಗಳವಾರ, 19 ಮಾರ್ಚ್ 2024 (16:22 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಟ್ಯಾಂಕರ್ ಮಾಫಿಯಾಗೆ ಶರಣಾಗಿ ಜನರಿಂದ ಸುಲಿಗೆ ಮಾಡಲು ಕೈಜೋಡಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮಾಡಿದರು. 
 
ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಮತ್ತೇ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಆರ್.ಆಶೋಕ್ ಅವರು ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ನಿಲುವಿನ ಬಗ್ಗೆ ಆಕ್ರೋಶ ಹೊರ ಹಾಕಿದರು. 
 
ಆರ್.ಅಶೋಕ್ ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ: 
ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಸಂಪೂರ್ಣ ವಿಫಲಾವಾಗಿರುವ ಸಿಎಂ @siddaramaiah ಹಾಗೂ ಡಿಸಿಎಂ @DKShivakumar
 ಅವರು ಟ್ಯಾಂಕರ್ ಮಾಫಿಯಾಗೆ ಸಂಪೂರ್ಣ ಶರಣಾಗಿ ಜನರನ್ನು ಸುಲಿಗೆ ಮಾಡಲು ತಾವೂ ಕೈಜೋಡಿಸಿದಂತಿದೆ.
 
ಗಡುವು ಮುಗಿದಿದ್ದರೂ ಸರ್ಕಾರದ ಆದೇಶಕ್ಕೆ ಕ್ಯಾರೇ ಅನ್ನದೆ ಅರ್ಧಕ್ಕರ್ಧದಷ್ಟು ಖಾಸಗಿ ಟ್ಯಾಂಕರ್ ಗಳು ಇನ್ನೂ ನೋಂದಣಿಯೇ ಮಾಡಿಕೊಂಡಿಲ್ಲ. ಕಾಟಾಚಾರಕ್ಕೆ ನೋಂದಣಿ ಮಾಡಿಕೊಂಡಿರುವ ಟ್ಯಾಂಕರ್ ಗಳು ಸರ್ಕಾರ ನಿಗದಿ ಮಾಡಿರುವ ದರಕ್ಕೆ ನೀರು ಕೊಡುತ್ತಿಲ್ಲ.
 
ಇಷ್ಟೆಲ್ಲಾ ಗೊಂದಲಗಳಿಂದ ನೀರಿಲ್ಲದೆ ಬೆಂಗಳೂರಿನ ಜನತೆ ಪರದಾಡುತ್ತಿದ್ದರೆ @INCKarnataka
 ಸರ್ಕಾರ ಏನೂ ಆಗಿಲ್ಲವೆಂಬಂತೆ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ.
 
ಸರ್ಕಾರಕ್ಕೆ ನಿಜವಾಗಲೂ ನೀರಿನ ಸಮಸ್ಯೆ ಬಗೆಹರಿಸುವ ಬದ್ಧತೆ ಇದ್ದರೆ ನೊಂದಣಿ ಮಾಡಿಕೊಳ್ಳದ, ಸರ್ಕಾರದ ನಿಯಮ ಪಾಲಿಸದ ಟ್ಯಾಂಕರ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ವಾರ್ಡ್ ಗಳಲ್ಲೂ ಮಾರ್ಷಲ್ ಗಳನ್ನು ನೇಮಿಸಿ ಟ್ಯಾಂಕರ್ ಗಳ ಮೇಲೆ ನಿಗಾ ಇಡಬೇಕು.
 
ಈಗಿರುವ ಸಹಾಯವಾಣಿ ಜನರಿಗೆ ಸ್ಪಂದಿಸಲು ವಿಫಲವಾಗಿದ್ದು, ಸರ್ಕಾರ ಖಾಸಗಿ ಸಂಸ್ಥೆಗಳ ಸಹಾಯದಿಂದ ಒಂದು ವಾರ್ಡ್ ಗೆ ಒಂದರಂತೆ  ಕನಿಷ್ಠ 200 ದೂರವಾಣಿ ಲೈನ್ ಗಳ ಸಂಪರ್ಕ ಹೊಂದಿರುವ ಕಾಲ್ ಸೆಂಟರ್ ತೆರೆದು ಜನರ ಬೇಡಿಕೆಗೆ ಸ್ಪಂದಿಸುವ ಕೆಲಸ ಮಾಡಬೇಕು. ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments