Webdunia - Bharat's app for daily news and videos

Install App

ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಬಿಡ್ತೀರಿ, ನಾವು ಓಡಾಡ್ಬಾರ್ದಾ: ವಿಧಾನಸೌದದಲ್ಲಿ ಸಿಟ್ಟಾದ ಆರ್ ಆಶೋಕ್

Krishnaveni K
ಗುರುವಾರ, 25 ಜುಲೈ 2024 (09:46 IST)
ಬೆಂಗಳೂರು: ರಾಜ್ಯ ಸರ್ಕಾರದ ಮುಡಾ ಹಗರಣದ ವಿರುದ್ಧ ತನಿಖೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ ನಾಯಕರು ನಿನ್ನೆ ರಾತ್ರಿಯಿಡೀ ಸದನದಲ್ಲೇ ಕಾಲ ಕಳೆದಿದ್ದಾರೆ.

ಆರ್ ಅಶೋಕ್, ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ಶಾಸಕರ ಜೊತೆ ಜೆಡಿಎಸ್ ಶಾಸಕರೂ ಸಾಥ್ ನೀಡಿದ್ದಾರೆ. ಎಲ್ಲರೂ ಸೇರಿ ಸದನದಲ್ಲಿ ಹಾಡು ಕಟ್ಟಿ ಹಾಡುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕಾಲ ಕಳೆದಿದ್ದಾರೆ. ಈ ನಡುವೆ ಸದನದ ಎಲ್ಲಾ ಭಾಗಗಳಲ್ಲಿ ಓಡಾಡಲು ಪೊಲೀಸರು, ಅಧಿಕಾರಿಗಳು ಬಂದು ನಿರ್ಬಂಧ ವಿಧಿಸಲು ಮುಂದಾದರು.

ಸದನದ ಒಳಗೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ತಡೆಯಲು ಮುಂದಾದಾಗ ಆರ್ ಅಶೋಕ್ ಸಿಟ್ಟಾದರು. ಹೊರಗೆ ನಿಂತಿದ್ದ ಪೊಲೀಸ್ ಅಧಿಕಾರಿ ಬಳಿ ಬಂದ ಅಶೋಕ್, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವವರಿಗೆಲ್ಲಾ ಇಲ್ಲಿ ಓಡಾಡಲು ಅವಕಾಶ ಕೊಡ್ತೀರಿ. ನಾವು ಇಲ್ಲಿ ಓಡಾಡಬಾರದಾ? ನಾವೇನು ಕಳ್ಳರಾ? ಇಂತಹ ದರ್ಪ ಎಲ್ಲಾ ತುಂಬಾ ದಿನ ನಡೆಯಲ್ಲ. ಇದು ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿದ ವಿಧಾನಸೌಧ’ ಎಂದು ಕೂಗಾಡಿದರು. ಬಳಿಕ ಪೊಲೀಸರು ಅಲ್ಲಿಂದ ತೆರಳಿದರು.

ಬಳಿಕ ಒಳಗೆ ಕೂತಿದ್ದ ಶಾಸಕರನ್ನು ಅಧಿಕಾರಿಗಳು ಓಡಾಡದಂತೆ ಮನವೊಲಿಸಲು ಬಂದಾಗ ಅಶೋಕ್ ರೇಗಾಡಿದರು. ನಿಮ್ಮ ಮಾತನ್ನೆಲ್ಲಾ ಕೇಳಕ್ಕಾಗಲ್ಲ ಎಂದರು. ಇನ್ನು ರಾತ್ರಿ ಮಲಗುವವರೆಗೂ ಹಾಡು ಕಟ್ಟಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments