Webdunia - Bharat's app for daily news and videos

Install App

ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

Krishnaveni K
ಶುಕ್ರವಾರ, 3 ಮೇ 2024 (15:18 IST)
Photo Courtesy: X
ರಾಯ್ ಬರೇಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಈಗಾಗಲೇ ವಯನಾಡಿನಲ್ಲಿ ಸ್ಪರ್ಧಿಸಿದ್ದಾರೆ. ಇದೀಗ ರಾಯ್ ಬರೇಲಿಯಲ್ಲೂ ಸ್ಪರ್ಧೆ ನಡೆಸಲು ಮುಂದಾಗಿದ್ದಾರೆ. ಕಳೆದ ಬಾರಿಯೂ ರಾಹುಲ್ ಈ ಎರಡೂ ಕ್ಷೇತ್ರಗಳಿಂದ ಸ್ಪರ್ಧೆ ನಡೆಸಿದ್ದರು. ಈ ಪೈಕಿ ವಯನಾಡಿನಲ್ಲಿ ಗೆದ್ದರೆ, ರಾಯ್ ಬರೇಲಿಯಲ್ಲಿ ಸ್ಮೃತಿ ಇರಾನಿ ಎದುರು ಸೋಲು ಅನುಭವಿಸಿದ್ದರು.

ಈ ಬಾರಿ ರಾಹುಲ್ ಗೆ ರಾಯ್ ಬರೇಲಿಯಲ್ಲಿ ಸ್ಪರ್ಧೆ ನಡೆಸಲು ಅಷ್ಟೊಂದು ಒಲಿವಿರಲಿಲ್ಲ. ಹಾಗಿದ್ದರೂ ಪಕ್ಷದ ನಾಯಕರ ಒತ್ತಾಯದ ಮೇರೆಗೆ ರಾಯ್ ಬರೇಲಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಈ ಮೊದಲಿನಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಕುಟುಂಬದವರೇ ಸ್ಪರ್ಧೆ ನಡೆಸುತ್ತಿದ್ದಾರೆ.

ಈ ವೇಳೆ ಅವರ ಜೊತೆಗೆ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕ, ಅವರ ಪತಿ ರಾಬರ್ಟ್ ವಾದ್ರಾ, ಎಐಸಿಸಿ ಅಧ್ಯಕ್ಷ ಮುಂತಾದವರು ಸಾಥ್ ನೀಡಿದ್ದಾರೆ. ಅಮೇಠಿ ಮತ್ತು ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅಮೇಠಿಯಿಂದ ಕಾಂಗ್ರೆಸ್ ಕೆಎಲ್ ಶರ್ಮಾರನ್ನು ಕಣಕ್ಕಿಳಿಸಿದೆ. ಈ ಮೂಲಕ 25 ವರ್ಷಗಳ ಬಳಿಕ ಈ ಕ್ಷೇತ್ರದಿಂದ ಗಾಂಧಿ ಕುಟುಂಬದ ಹೊರತಾಗಿ ಬೇರೊಬ್ಬ ಅಭ್ಯರ್ಥಿ ಕಾಂಗ್ರೆಸ್ ನಿಂದ ಸ್ಪರ್ಧೆಗಿಳಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಸಾಕ್ಷಿ ಕೇಳುವವರನ್ನು ಪಾಕ್‌ಗೆ ಕಳುಹಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಮುಂದಿನ ಸುದ್ದಿ
Show comments