Webdunia - Bharat's app for daily news and videos

Install App

BJP ವಿರುದ್ಧ ರಾಹುಲ್​ ಗಾಂಧಿ ವಾಗ್ದಾಳಿ

Webdunia
ಮಂಗಳವಾರ, 22 ನವೆಂಬರ್ 2022 (18:29 IST)
ಭಾರತ್ ಜೋಡೋ ಯಾತ್ರೆ ವೇಳೆ ರೈತರು, ಯುವಕರು ಮತ್ತು ಬುಡಕಟ್ಟು ಜನಾಂಗದವರನ್ನು ಭೇಟಿಯಾದ ನಂತರ ಅವರ ನೋವು ಏನೆಂಬುದನ್ನು ಅರಿತಿದ್ದೇನೆ. BJP ಅರಣ್ಯವನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಮೂಲಕ  ಆದಿವಾಸಿಗಳನ್ನು ಸ್ಥಳಾಂತರಿಸುವ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  ಗುಜರಾತ್​​​ನಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಂತೆಯೇ ಮೊದಲ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬುಡಕಟ್ಟು ಜನಾಂಗದವರು ದೇಶದ ಮೊದಲ ಮಾಲೀಕರು ಎಂದು ಪ್ರತಿಪಾದಿಸಿದರು. ಆದರೆ BJP ಅವರು ವಾಸಿಸುತ್ತಿರುವ ಅರಣ್ಯ ಪ್ರದೇಶ ತೆಗೆದುಕೊಂಡು ಅವರ ಮಕ್ಕಳನ್ನು ಆಧುನಿಕ ಶಿಕ್ಷಣದಿಂದ ದೂರವಿಡುವ ಕೆಲಸ ಮಾಡುತ್ತಿದೆ ಎಂದರು. ದೇಶದ ಏಕತೆಗಾಗಿ 3,570 ಕಿಮೀ ಯಾತ್ರೆ ನಡೆಸಲಾಗುತ್ತಿದೆ. ಈ ಸಮಯದಲ್ಲಿ ರೈತರು, ಯುವಕರು ಮತ್ತು ಬುಡಕಟ್ಟು ಸಮುದಾಯದ ಜನರ ಸಮಸ್ಯೆಯನ್ನು ಆಲಿಸಿದ ನಂತರ ಅವರ ನೋವನ್ನು ತಾನು ಕೂಡಾ ಅನುಭವಿಸಿರುವುದಾಗಿ ತಿಳಿಸಿದರು. ಈವರೆಗಿನ ಯಾತ್ರೆಯ ಅನುಭವವನ್ನು ಹಂಚಿಕೊಂಡ ಕಾಂಗ್ರೆಸ್ ನಾಯಕ, ರೈತರು, ಯುವಕರು ಮತ್ತು ಬುಡಕಟ್ಟು ಜನಾಂಗದವರೊಂದಿಗೆ ಮಾತನಾಡುವಾಗ ದುಃಖವಾಯಿತು. ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ದರ, ಬೆಳೆ ವಿಮೆ ಹಣ ಅಥವಾ ಸಾಲ ಮನ್ನಾ ಆಗದೆ ತಮ್ಮ ಅನುಭವವನ್ನು ಹಂಚಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments