Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರಾತ್ರಿ ಮಳೆ, ಕರ್ನಾಟಕದಲ್ಲಿ ಇನ್ನಷ್ಟು ಮಳೆ

Krishnaveni K
ಮಂಗಳವಾರ, 7 ಮೇ 2024 (09:08 IST)
ಬೆಂಗಳೂರು: ಬಿಸಿಲ ತಾಪದಿಂದ ಬಳಲಿದ್ದ ಬೆಂಗಳೂರಿಗೆ ಮತ್ತೆ ಮಳೆರಾಯ ತಂಪೆರಚಿದ್ದಾನೆ. ನಿನ್ನೆ ರಾತ್ರಿಯೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕರ್ನಾಟಕದ ಹಲವೆಡೆ ಮಳೆಯಾಗಿದೆ.

ಮೇ 5 ರಿಂದ ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮೊನ್ನೆ ಒಂದು ದಿನ ಬಿಡುವು ಪಡೆದಿದ್ದ ವರುಣ ನಿನ್ನೆ ಬೆಂಗಳೂರಿಗೆ ಬಂದಿಳಿದಿದ್ದಾನೆ. ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುಳಿದಿದ್ದು ಸಣ್ಣಪುಟ್ಟ ಹಾನಿಯಾದ ಬಗ್ಗೆ ವರದಿಯಾಗಿದೆ.

ಸತತ ಬಿಸಿಲಿನಿಂದ ಬೇಸತ್ತಿದ್ದ ಜನಕ್ಕೆ ಈ ಮಳೆ ಮುದ ನೀಡಿದೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ, ಕರ್ನಾಟಕದ ಹಲವೆಡೆ ಅಲ್ಲಲ್ಲಿ ಮಳೆಯಾಗಿದೆ.  ಇಂದೂ ಕೂಡಾ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಮುನ್ಸೂಚನೆಯಿದೆ.  ಮೇ 10 ರವರೆಗೂ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಅಬ್ಬರಿಸಿತ್ತು. ಗಾಳಿ ಸಮೇತ ಮಳೆಯಾಗಿದ್ದು 25 ಕ್ಕೂ ಹೆಚ್ಚು ಮರಗಳು ಧರಾಶಾಯಿಯಾಗಿವೆ. ಬಿಟಿಎಂ ಲೇಔಟ್, ಯಶವಂತಪುರ, ಜಯನಗರ, ಕೋರಮಂಗಲ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments