Webdunia - Bharat's app for daily news and videos

Install App

ಬೆಂಗಳೂರು ಮಳೆ ಇಷ್ಟಕ್ಕೇ ನಿಂತಿಲ್ಲ: ಈ ದಿನದಿಂದ ಮತ್ತೆ ಶುರು

Krishnaveni K
ಶುಕ್ರವಾರ, 18 ಅಕ್ಟೋಬರ್ 2024 (11:34 IST)
ಬೆಂಗಳೂರು: ಎರಡು ದಿನಗಳ ಹಿಂದೆ ಅವಾಂತರ ಸೃಷ್ಟಿಸಿದ್ದ ಬೆಂಗಳೂರು ಮಳೆ ನಿನ್ನೆಯಿಂದ ಕೊಂಚ ಬಿಡುವು ನೀಡಿದೆ. ಹಾಗಂತ ಅಷ್ಟಕ್ಕೇ ಸಮಾಧಾನವಾಗಬೇಕಿಲ್ಲ. ಈ ದಿನದಿಂದ ಮತ್ತೆ ಮಳೆಯಾಗಲಿದೆ ಎಂದಿದೆ ಹವಾಮಾನ ವರದಿ.

ವಾಯುಭಾರ ಕುಸಿತದಿಂದಾಗಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಈ ವರ್ಷ ಈ ಮಟ್ಟಿಗೆ ಮಳೆ ಬಂದೇ ಇರಲಿಲ್ಲ. ಆ ಪ್ರಮಾಣದಲ್ಲಿ ಮಳೆ ಬಂದಿದ್ದರಿಂದ ಇಡೀ ಬೆಂಗಳೂರಿನ ರಸ್ತೆಗಳೆಲ್ಲಾ ಸಮುದ್ರದಂತಾಗಿತ್ತು. ಕಳೆದ ಎರಡು ದಿನಗಳಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ.

ನಿನ್ನೆ ಮೋಡ ಕವಿದ ವಾತಾವರಣವಿದ್ದರೂ ಮಳೆಯಿರಲಿಲ್ಲ. ಇಂದು ಕೊಂಚ ಬಿಸಿಲೂ ಕಂಡುಬಂದಿದೆ. ಆದರೆ ಇಷ್ಟಕ್ಕೇ ಮಳೆ ನಿಂತಿಲ್ಲ. ಅಕ್ಟೋಬರ್ 21 ರ ನಂತರ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 21 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಈ ಹಿನ್ನಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಎಲ್ಲೊ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments