ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ನಂಟು

geetha
ಶನಿವಾರ, 2 ಮಾರ್ಚ್ 2024 (16:00 IST)
ಬೆಂಗಳೂರು : ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ನಿನ್ನೆಯ ಸ್ಫೋಟಕ್ಕೂ ಯಾವುದೇ ರೀತಿಯ ಸಾಮ್ಯತೆಯಿಲ್ಲ. ಅದು ಕುಕ್ಕರ್‌ ನಲ್ಲಿ ಆದ ಬ್ಲಾಸ್ಟ್‌ . ಇಲ್ಲಿ ಯಾವ ಕುಕ್ಕರೂ ಬ್ಲಾಸ್ಟ್‌ ಆಗಿಲ್ಲ ಎಂದು ಸಿಎಂ ಹೇಳಿಕೆ ನೀಡಿದ್ದರು. ತುಸು ಹೊತ್ತಿನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವು ಮಂಗಳೂರು ಸ್ಫೋಟ ಪ್ರಕರಣದೊಂದಿಗೆ ಸಾಮ್ಯತೆ ಹೊಂದಿದೆ. ಎರಡೂ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಸಾಕಷ್ಟು ಹೋಲಿಕೆ ವ್ಯಕ್ತವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಒಂದು ತಂಡ ಅಲ್ಲಿಗೂ ಸಹ ತೆರಳಿದೆ ಎಂದು ಹೇಳಿಕೆ ನೀಡಿದ್ದಾರೆ.

ಶುಕ್ರವಾರ ನಗರದ ರಾಮೇಶ್ವರಂ ಕೆಫೆ ಹೋಟೆಲ್‌ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯಲ್ಲಿಯೇ ಪರಸ್ಪರ ವಿರೋಧ ವ್ಯಕ್ತವಾಗಿದೆ. ಮಂಗಳೂರು ಕುಕ್ಕರ್‌ ಸ್ಪೋಟಕ್ಕೂ ರಾಮೇಶ್ವರಂ ಕೆಫೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೆ, ಎರಡೂ ಪ್ರಕರಣಗಳಿಗೆ ಸಾಕಷ್ಟು ಸಾಮ್ಯತೆಯಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. 
 
ಸಿಎಂ ಮತ್ತು ಡಿಸಿಎಂ ಅವರ ಪರಸ್ಪರ ವೈರುಧ್ಯಗಳ ಹೇಳಿಕೆಯಿಂದಾಗಿ ಗೊಂದಲ ಸೃಷ್ಟಿಯಾಗಿದ್ದು, ಇಬ್ಬರ ನಡುವೆ ಸಮನ್ವಯದ ಕೊರತೆಯಿದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments