Publish Date: Wed, 15 Feb 2023 (19:49 IST)
Updated Date: Wed, 15 Feb 2023 (19:55 IST)
ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. BSY ಅವರನ್ನು ನಾನು ತಂದೆಯಂತೆ ಕಾಣುತ್ತೇನೆ. ಸ್ನೇಹಿತ ಬಿ.ಶ್ರೀರಾಮುಲು ಹಾಗೂ ನನ್ನ ಸಹೋದರರನ್ನು ನಾನು ದುರುಪಯೋಗ ಪಡಿಸಿಕೊಂಡಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಯಾದಗಿರಿ ತಾಲೂಕಿನ ಹೆಡಗಿಮುದ್ರಾ ಗ್ರಾಮದಲ್ಲಿ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ, ಯಾರನ್ನೂ ದುರುಪಯೋಗ ಮಾಡಿಕೊಂಡು ನಾನು ಪಕ್ಷಕ್ಕೆ ಆಹ್ವಾನ ಮಾಡಿಲ್ಲ. ನೀವು ಲಕ್ಷ ಪ್ರಶ್ನೆ ಕೇಳಿದ್ರೂ ನಾನು ಇನ್ನೊಬ್ಬರ ಹೆಸರು ತೆಗೆದುಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ರು.