Webdunia - Bharat's app for daily news and videos

Install App

ಮದುವೆಯ ನೆಪವೊಡ್ಡಿ ಅತ್ಯಾಚಾರ: ಕಾಂಗ್ರೆಸ್ ಸಂಸದನ ವಿರುದ್ಧ ಪ್ರಕರಣ ದಾಖಲು

Sampriya
ಶನಿವಾರ, 18 ಜನವರಿ 2025 (20:11 IST)
ಸೀತಾಪುರ: ಮದುವೆಯ ನೆಪವೊಡ್ಡಿ ತನ್ನ ಮೇಲೆ ಸೀತಾಪುರದ ಕಾಂಗ್ರೆಸ್ ಸಂಸದರೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಠಾಣೆ ಮೆಟ್ಟಿಲೇರಿದ್ದಾರೆ.

ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿದ ರಾಕೇಶ್‌ ರಾಥೋರ್‌ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ.

ನಗರದ ಬುಟ್ಸ್‌ಗಂಜ್ ಪ್ರದೇಶದ ನಿವಾಸಿಯಾಗಿರುವ ಮಹಿಳೆ ಜನವರಿ 15 ರಂದು ರಾಥೋಡ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಕೊತ್ವಾಲಿ ನಗರ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡು ದೂರುದಾರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

2020ರಲ್ಲಿ ಬಿಜೆಪಿ ಶಾಸಕರಾಗಿದ್ದಾಗ ರಾಥೋರ್‌ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ಎಸ್ಪಿ ತಿಳಿಸಿದ್ದಾರೆ. ಇದಾದ ನಂತರ ರಾಥೋಡ್ ಆಕೆಗೆ ಹತ್ತಿರವಾದ. ರಾಥೋರ್‌ ಅವರೊಂದಿಗೆ ಪರಿಚಯವಾದ ನಂತರ, ಸೀತಾಪುರದ ತೈಲಿಕ್ ಮಹಾಸಂಘದ ಮಹಿಳಾ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಯಿತು ಎಂದು ಮಹಿಳೆ ಹೇಳಿದರು. ಇದಾದ ನಂತರ, ರಾಥೋರ್‌ 2020 ರ ಮಾರ್ಚ್‌ನಲ್ಲಿ ಮಹಿಳೆಯನ್ನು ತನ್ನ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ತೆ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾಥೋರ್‌ ತನ್ನನ್ನು ದೈಹಿಕವಾಗಿ ಶೋಷಣೆ ಮಾಡುತ್ತಲೇ ಇದ್ದಾನೆ ಎಂದು ದೂರುದಾರರು ಹೇಳಿದ್ದಾರೆ. ಸಂಸದರಾದ ನಂತರ ರಾಥೋಡ್ ಮಹಿಳೆಗೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಕಿರುಕುಳ ನೀಡಲಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮಿಶ್ರಾ ಅವರಿಗೆ ಲಿಖಿತ ದೂರು ದಾಖಲಿಸಿದ್ದಾರೆ ಮತ್ತು ಸಾಕ್ಷ್ಯವನ್ನು ಸಹ ಒದಗಿಸಿದ್ದಾರೆ ಮತ್ತು ಸಂಸದರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments