ಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆ ಮತ್ತೆ ಶುರುವಾಗಿರುವುದಕ್ಕೆ ಕಾರಣ ಇಲ್ಲಿದೆ

Krishnaveni K
ಭಾನುವಾರ, 8 ಫೆಬ್ರವರಿ 2026 (10:05 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಒಮ್ಮೆ ತಣ್ಣಗಾಗಿದ್ದ ರಾಜಕೀಯ ವಿದ್ಯಮಾನಗಳು ಈಗ ಮತ್ತೆ ಭುಗಿಲೇಳಲು ಕಾರಣಗಳು ಹಲವು ಎನ್ನಲಾಗುತ್ತಿದೆ.

ಡಿಸೆಂಬರ್ ನಲ್ಲಿ ಸುಂಟರ ಗಾಳಿ ಎಬ್ಬಿಸಿದ್ದ ಸಿಎಂ ಬದಲಾವಣೆ ವಿಚಾರ ಜನವರಿ ಹೊತ್ತಿಗೆ ತಣ್ಣಗಾಗಿತ್ತು. ಹೈಕಮಾಂಡ್ ನಿಂದ ಸ್ವಲ್ಪ ದಿನ ಕಾಯುವಂತೆ ಸಂದೇಶ ಬಂದ ಹಿನ್ನಲೆಯಲ್ಲಿ ಇಷ್ಟು ದಿನ ಎರಡೂ ಬಣದ ನಾಯಕರು ಸುಮ್ಮನಿದ್ದರು ಎಂದು ಹೇಳಲಾಗುತ್ತಿದೆ.

ಆದರೆ ಹೈಕಮಾಂಡ್ ಎರಡು ಅಧಿವೇಶನಗಳೇ ಮುಗಿದರೂ ಇನ್ನೂ ರಾಜ್ಯ ನಾಯಕರಿಗೆ ಬುಲಾವ್ ನೀಡದೇ ಇರುವುದು ಡಿಕೆಶಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಇದಕ್ಕೆ ತಕ್ಕಂತೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿಂದತಾಗಿದೆ.

ಪಂಚ ರಾಜ್ಯಗಳ ಚುನಾವಣೆಯೂ ಹತ್ತಿರದಲ್ಲಿದ್ದು ಈ ಹಂತದಲ್ಲೇ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರವಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಅಲ್ಲದೆ ಬಜೆಟ್ ಕೂಡಾ ಹತ್ತಿರ ಬರುತ್ತಿದ್ದು ದಾಖಲೆ ಬಜೆಟ್ ಮಂಡಿಸಿದ ಬಳಿಕ ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟುಕೊಡಲು ಮನಸ್ಸು ಮಾಡಬಹುದು ಎಂದು ಡಿಕೆಶಿ ಬಣ ಲೆಕ್ಕಾಚಾರ ಹಾಕಿರಬಹುದು. ಈ ಎಲ್ಲಾ ಕಾರಣಕ್ಕೆ ಈಗ ಮತ್ತೆ ಸಿಎಂ ಬದಲಾವಣೆ ವಿಚಾರ ಗರಿಗೆದರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments