Webdunia - Bharat's app for daily news and videos

Install App

ಕೆಎಂಎಫ್‌ ಇತಿಹಾಸದಲ್ಲೇ ದಾಖಲೆ ನಿರ್ಮಿಸಿದ ಹಾಲಿನ ಉತ್ಪಾದನೆ

Sampriya
ಶನಿವಾರ, 29 ಜೂನ್ 2024 (19:00 IST)
Photo Courtesy X
ಬೆಂಗಳೂರು: ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ ಒಂದು ಕೋಟಿ ಲೀಟರ್ ದಾಟಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು,  ರಾಜ್ಯದಲ್ಲಿ ಕಳೆದ ವರ್ಷ ಪ್ರತಿದಿನ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇದೀಗ ಒಂದು ಕೋಟಿ ಲೀಟರ್ ದಾಟಿದೆ.  ಈ ಶ್ರೇಯ ನಾಡಿನ ಪ್ರತಿಯೊಬ್ಬ ಶ್ರಮಜೀವಿ ಹೈನುಗಾರನಿಗೂ ಸಲ್ಲಬೇಕು' ಎಂದು ಅಭಿನಂದಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಹೀಗಿದೆ.  ನಮ್ಮ‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈನುಗಾರರಿಂದ ಖರೀದಿಸುವ ಹಾಲಿಗೆ ರೂ.3 ಹೆಚ್ಚಳ ನೀಡುತ್ತಿರುವುದು, ಉತ್ತಮ ಮುಂಗಾರಿನಿಂದಾಗಿ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿರುವುದು ಈ ಎಲ್ಲಾ ಕಾರಣದಿಂದಾಗಿ ಕಳೆದ ವರ್ಷ ನಿತ್ಯ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ.

ಯಾವ ಕೆಎಂಎಫ್ ಸಂಸ್ಥೆಯನ್ನು ಹಿಂದಿನ ಬಿಜೆಪಿ‌ ಸರ್ಕಾರ ನಷ್ಟದ ಹಾದಿಗೆ ತಳ್ಳಿ ಗುಜರಾತ್‌ನ ಅಮೂಲ್ ಜೊತೆ ವಿನೀಲ ಮಾಡುವ ಕುತಂತ್ರ ನಡೆಸಿತ್ತೋ, ಕನ್ನಡಿಗ ರೈತರು ದಶಕಗಳ ಕಾಲ ಶ್ರಮದಿಂದ ಕಟ್ಟಿದ ಸಂಸ್ಥೆಯನ್ನು ಯಾರದೋ ಮರ್ಜಿಗೆ ಒಳಗಾಗಿ ವಿಲೀನದ ಹೆಸರಲ್ಲಿ ಮುಳುಗಿಸಲು ಹೊರಟಿತ್ತೋ, ಅದೇ ಕೆಎಂಎಫ್ ಇಂದು ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ, ಇತಿಹಾಸದಲ್ಲೇ ಹೊಸದೊಂದು ದಾಖಲೆ ಬರೆದಿದೆ.

ಈ ಶ್ರೇಯ ನಾಡಿನ ಪ್ರತಿಯೊಬ್ಬ ಶ್ರಮಜೀವಿ ಹೈನುಗಾರನಿಗೂ ಸಲ್ಲಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments