Webdunia - Bharat's app for daily news and videos

Install App

ವ್ಯಾಪಾರ ನಿರ್ಬಂಧ ತೆರವು, 144 ಸೆಕ್ಷನ್‌ ಮುಂದುವರಿಕೆ?

Webdunia
ಸೋಮವಾರ, 8 ಆಗಸ್ಟ್ 2022 (13:25 IST)
ಮಂಗಳೂರು : 2 ಕೊಲೆಗಳಿಂದ ಬೆಚ್ಚಿಬಿದ್ದಿದ್ದ ದಕ್ಷಿಣ ಕನ್ನಡ  ಜಿಲ್ಲೆ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ.
 
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ವ್ಯಾಪಾರ ವಹಿವಾಟು ಹಾಗೂ ಜನರ ಓಡಾಟಕ್ಕೆ ಸಂಬಂಧಿಸಿದಂತ ಜಿಲ್ಲಾಡಳಿತ ಕೆಲವು ನಿರ್ಬಂಧ ಜಾರಿಗೊಳಿಸಿತ್ತು.

ಈ ನಿರ್ಬಂಧಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಆದರೆ  ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಆಗಸ್ಟ್ 14ರ ಮಧ್ಯರಾತ್ರಿವರೆಗೆ ಮುಂದುವರಿಯಲಿದೆ. ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಈ ಬಗ್ಗೆ ಮಾತಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲೆಯಲ್ಲಿ ನಿರ್ಮಾಣವಾಗಿದ್ದ ಬಿಗುವಿನ ವಾತಾವರಣ ತಿಳಿಯಾಗಿದ್ದು, ಶಾಂತಿ ಸುವ್ಯವಸ್ಥೆಯಲ್ಲಿ ಮಹತ್ತರ ಸುಧಾರಣೆಗಳಾಗಿವೆ.

ವ್ಯಾಪಾರ ವಹಿವಾಟುಗಳಿಗೆ, ಜನರ ಓಡಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಇದೇ 8 ರಿಂದ ಜಾರಿಯಾಗುವಂತೆ ಹಿಂಪಡೆಯಲಾಗಿದೆ. ಹಾಗಾಗಿ ಮದ್ಯ ಮಾರಾಟ ಮಳಿಗೆಗಳು ಸೇರಿದಂತೆ ಜಿಲ್ಲೆಯ ಎಲ್ಲ ಅಂಗಡಿಗಳು ಇನ್ನು ಮೊದಲಿನಂತೆಯೇ ವ್ಯಾಪಾರ ವಹಿವಾಟು ನಡೆಸಬಹುದು ಎಂದು ತಿಳಿಸಿದ್ದಾರೆ

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments