Webdunia - Bharat's app for daily news and videos

Install App

ಯತ್ನಾಳ್ ಆಡಿಯೋ, ವಿಡಿಯೋ ಬಿಡುಗಡೆ ಮಾಡ್ಲ: ರೇಣುಕಾಚಾರ್ಯ ಹೊಸ ಬಾಂಬ್‌

Sampriya
ಮಂಗಳವಾರ, 1 ಏಪ್ರಿಲ್ 2025 (17:38 IST)
Photo Courtesy X
ಬೆಂಗಳೂರು: ಅಂಡ್ಜೇಸ್ಟ್‌ಮೆಂಟ್ ರಾಜಕಾರಣ ಹಾಗೂ ತಮ್ಮ ಹರಕು ಬಾಯಿಯಿಂದ ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಲಿಪಶುವಾಗಿದ್ದಾರೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ಕಿಡಿಕಾರಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಡ್ಜೇಸ್ಟ್‌ಮೆಂಟ್ ರಾಜಕಾರಣದ ಬಗ್ಗೆ ಮಾತನಾಡಿರುವ ಯತ್ನಾಳ್ ಅವರೇ, ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 9200ಕ್ಕೂ ಅಧಿಕ ಮತಗಳು ಹೇಗೆ ಬಂತು. ಇದಕ್ಕೆ ಹೇಳುವುದು ಅಂಡ್ಜೇಸ್ಟ್‌ಮೆಂಟ್ ರಾಜಕಾರಣ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣನೇ ಯತ್ನಾಳ್ ಅವರು ಎಂದು ಆರೋಪ ಮಾಡಿದರು.

ಅಂಡ್ಜೇಸ್ಟ್‌ಮೆಂಟ್ ರಾಜಕಾರಣ ಹಾಗೂ ಹರಕು ಬಾಯಿಯಿಂದ ಯತ್ನಾಳ್ ಬಲಿಪಶುವಾಗಿದ್ದಾರೆ. ಅನಗತ್ಯವಾಗಿ ಟೀಕೆಗಳನ್ನು ಮಾಡಿದರು.  ನಾನು ಈ ಹಿಂದೆ ಹೇಳಿದಂತೆ ಯತ್ನಾಳ್ ಅವರು ಬಲಿಪಶುವಾಗಿದ್ದಾರೆ ಎಂದರು.

ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಅವರನ್ನು ಟೀಕೆ ಮಾಡಿದರು. ಅದಲ್ಲದೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡರು. ಅಧಿವೇಶನದಲ್ಲಿ ₹2ಸಾವಿರ ಕೋಟಿ ಎಂದು ಹೇಳಿ, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರಧಾರಿ, ಸೂತ್ರದಾರಿಯಾದರು ಎಂದರು.

ಭಾರತೀಯ ಜನತಾ ಪಾರ್ಟಿ, ಬಿಎಸ್‌ ಯಡಿಯೂರಪ್ಪ ಅವರನ್ನು ಕೈಕಾಲು ಹಿಡಿದು ಮಾತನಾಡಿರುವ ಆಡಿಯೋ, ವಿಡಿಯೋಗಳನ್ನು ಬಿಡುಗಡೆ ಮಾಡಬೇಕಾ. ಈ ಹಿಂದೆ ಯಡಿಯೂರಪ್ಪ ಅವರಿಂದ ರಾಜಕೀಯ ಬದುಕು ಎಂದಿದ್ದ ಯತ್ನಾಳ್ ಅವರ ಈಗ ಯಾಕೆ ಹೀಗೇ ಹೇಳುತ್ತಿದ್ದಾರೆ. ಅನಗತ್ಯವಾಗಿ ಈ ವೀರಶೈವ, ಲಿಂಗಾಯತ ಸಮುದಾಯವನ್ನು ಮುಂದಿಟ್ಟು ಮಾತನಾಡುತ್ತಿರುವ ಯತ್ನಾಳ್ ಅವರು ಹೊಸ ಪಕ್ಷ ಕಟ್ಟಲಿ ಎಂದು ಸವಾಲೆಸೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments