Webdunia - Bharat's app for daily news and videos

Install App

ಸ್ವಪಕ್ಷದವರ ವಿರುದ್ದ ಮತ್ತೆ ಮುಂದುವರಿದ ರೇಣುಕಾಚಾರ್ಯ ವಾಗ್ದಾಳಿ

Webdunia
ಗುರುವಾರ, 29 ಜೂನ್ 2023 (14:31 IST)
ನಾನು ಯಾವತ್ತಿಗೂ ಬಿಜೆಪಿ ವಿರುದ್ಧ ಮಾತಾಡಿಲ್ಲ.ಬಿಜೆಪಿ ನನಗೆ ಒಂದು ತಾಯಿಯ ಸಮಾನ.ಆದರೆ ಕೆಲವು ದೌರ್ಭಾಗ್ಯ ಗಳನ್ನು ಅನಿವಾರ್ಯ ವಾಗಿ ಮಾತಾಡಬೇಕಾಗುತ್ತದೆ.ಮಾಧ್ಯಮಗಳ ಮುಂದೆ ಮಾತಾಡೋದು ತಪ್ಪು ಹೌದು.ಯಾರಿಗೋ ಅಪಮಾನ, ಅವಮಾನ ಮಾಡುವ ಅವಶ್ಯಕತೆ ನನಗಿಲ್ಲ.ಅಧಿಕಾರದಲ್ಲಿ ಇದ್ದಾಗ ಯಡಿಯೂರಪ್ಪ ಇಳಿಯುವ ವರೆಗೂ ಮಾತಾಡಿದ್ರಲ್ಲ.ಶಾಸಕರ ಅಭಿಪ್ರಾಯ ಯಾಕೆ ಸಂಗ್ರಹ ಮಾಡಬೇಕಿತ್ತು.ಯಡಿಯೂರಪ್ಪ ರನ್ನು ಇಳಿಸಲೇಬೇಕೆಂದು ಕೆಲವರನ್ನು ಮಾತಾಡಿಸೋಕೆ ಬಿಟ್ರು.ಯಡಿಯೂರಪ್ಪ ರನ್ನು ಯಾವ ಪುರುಷಾರ್ಥಕ್ಮಾಗಿ ಇಳಿಸಿದ್ರಿ..?ಮತ ಕೇಳೋಕೆ ಯಡಿಯೂರಪ್ಪರ ಮುಖ ಬೇಕು.ಅಧಿಕಾರದ ಎಂಜಾಯ್ ಮಾಡಲು ಯಡಿಯೂರಪ್ಪ ಬೇಕು.ಮೇ‌ ೬ರಂದು ಬಿಜೆಪಿ ಕಚೇರಿ ಯಿಂದ ಒಬ್ಬರು ಫೋನ್ ಮಾಡ್ತಾರೆ.ಆಯನೂರರಲ್ಲಿ 25 ಸಾವಿರ ಜನರನ್ನು ಸೇರಿಸಬೇಕು ಅಂತಾ.ಹೊನ್ಮಾಳಿಗೆ ಮೋದಿ ಬರಲಿ ನಾನು ಬೇಕಿದ್ರೆ ಲಕ್ಷ ಜನರನ್ನು ಸೇರಿಸ್ರೀನಿ.ಆದರೆ ಅಲ್ಲಿಗೆ ನಾನು ಯಾಕೆ ಕರೆದುಕೊಂಡು ಬರಲಿ.ನಾನು ಹೇಳಿದ್ದೆ ಬರಲ್ಲ ಅಂತಾ, ಅಮೇಲೆ ಅವ್ರು ಮೋದಿ ಪಕ್ಕದಲ್ಲಿ ಸೀಟು ಇದೆ ಬನ್ನಿ ಅಂದ್ರು ಎಂದು ಬೆಂಗಳೂರಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸ್ವಪಕ್ಷದ ಪರ ವಾಗ್ದಾಳಿ ನಡೆಸಿದ್ದಾರೆ.
 
ಆದರೆ ನಾನು ಬರಲ್ಲ ಅಂದೆ, ಮೋದಿ ಯಡಿಯೂರಪ್ಪ ಮುಖ ತೋರಿಸಿ ಮತ ಕೇಳಬೇಕು ಇವರಿಗೆ ಅಷ್ಟೇ,ಯಡಿಯೂರಪ್ಪ ಸೈಕಲ್ ಓಡಿಸಿ, ಸ್ಕೂಟರ್ ಓಡಿಸಿ ಪಕ್ಷವನ್ನು ಅಧಿಕಾರಕ್ಕೆ ತಂದ್ರು.ನಾನು ಎತ್ತ ತಾಯಿ ಆಣೆಗೂ ಯಡಿಯೂರಪ್ಪ ನನಗೇನೂ ಹೇಳಿಕೊಟ್ಟಿಲ್ಲ.ಹಿಂದೆ ನನಗೂ ಅವರ ನಡುವೆ ತುಂಬಾ ಘರ್ಷಣೆಗಳು ಆಗಿವೆ.ಯಡಿಯೂರಪ್ಪ ಅಧಿಕಾರದಿಂದ ಇಳಿದೆ ಇದ್ದಿದ್ದೆ ನಾವು ನಮ್ಮಪ್ಪಾರಣೆಗೂ ಅಧಿಕಾರದಿಂದ ಇಳಿಯೋಕೆ ಆಗ್ತಿರಲಿಲ್ಲ.ಅಣ್ಣ ಮಲೈ ರನ್ನು ಕರೆದುಕೊಂಡು ರಾಜ್ಯದ ಉಸ್ತುವಾರಿ ಮಾಡ್ತೀರಲ್ಲ.ಈಶ್ವರಪ್ಪ, ಜಗದೀಶ್ ಶೆಟ್ಟರ್ ರನ್ನು ಎಲ್ಲರನ್ನು ಮುಗಿಸಿಬಿಟ್ರಲ್ಲ.ಬೊಮ್ಮಾಯಿ ಹೆಸರಿಗಷ್ಟೇ ಮುಖ್ಯಮಂತ್ರಿ ಆಗಿದ್ರು.ಆದರೆ ಅವರ ಕೈಗಳ ಎರಡನ್ನು ಕಟ್ಟಿ ಹಾಕಿದ್ರು.ಸ್ವಪಕ್ಷದವರ ವಿರುದ್ಧವೇ ರೇಣುಕಾಚಾರ್ಯ ಗುಟಿರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments