Webdunia - Bharat's app for daily news and videos

Install App

ಪವಿತ್ರ ಗೌಡ ಜಾಮೀನು ಅರ್ಜಿ ವಜಾ, ಸದ್ಯ ದರ್ಶನ್ ಗೆಳತಿಗೆ ಜೈಲೇ ಗತಿ

Sampriya
ಶನಿವಾರ, 31 ಆಗಸ್ಟ್ 2024 (17:30 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಜೈಶಂಕರ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇದೀಗ ಜಾಮೀನು ಅರ್ಜಿ ವಜಾ ಮಾಡಿ  ಸಿಸಿಎಚ್‌ 57ನೇ ನ್ಯಾಯಾಲಯ ಈ ಆದೇಶವನ್ನು ಪ್ರಕಟ ಮಾಡಿದೆ.  ಇದಿರಂದ ದರ್ಶನ್ ಗೆಳತಿ ಪವಿತ್ರ ಗೌಡಗೇ ಸದ್ಯ ಜೈಲೇ ಗತಿಯಾಗಿದೆ.

ಇದರೊಂದಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣ ಎ7 ಆರೋಪಿ ಅನುಕುಮಾರ್ ಅವರ ಜಾಮೀನು ಕೂಡಾ  ಅರ್ಜಿ ವಜಾ ಆಗಿದೆ.

ರೇಣುಕಾಸ್ವಾಮಿ ಕೇಸ್​​ನಲ್ಲಿ ನಟಿ ಪವಿತ್ರ ಗೌಡ ಜಾಮೀನು‌ ಕೋರಿ ಅರ್ಜಿ‌ ಸಲ್ಲಿಸಿದ್ದರು. ಆ ಅರ್ಜಿಯ
ವಿಚಾರಣೆ ಈಗಾಗಲೇ ನಡೆದಿತ್ತು. ಸಿಸಿಎಚ್ 57 ರಲ್ಲಿ ಜಾಮೀನು‌ ಅರ್ಜಿ ವಿಚಾರಣೆ ಮಾಡಿದ್ದು ಪವಿತ್ರಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಮೊದಲು ವಾದ ಮಂಡಿಸಿದ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪಾತ್ರವನ್ನು ವಿವರಿಸಿದರು. ಅದಲ್ಲದೆ ಮಹಿಳೆ ಎನ್ನುವ  ಕಾರಣಕ್ಕೆ ಜಾಮೀನು ನೀಡಬಾರದು ಎಂದಿದ್ದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments