Webdunia - Bharat's app for daily news and videos

Install App

ದರ್ಶನ್ ಅರೆಸ್ಟ್: ರೇಣುಕಾಸ್ವಾಮಿ ಮರಣೋತ್ತರ ವರದಿಯಲ್ಲಿದೆ ಶಾಕಿಂಗ್ ವಿಚಾರಗಳು

Krishnaveni K
ಗುರುವಾರ, 13 ಜೂನ್ 2024 (13:46 IST)
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನ ಟಾರ್ಚರ್ ನಿಂದಾಗಿ ಸಾವನ್ನಪ್ಪಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿಗಳು ಬಂದಿದ್ದು, ಬೆಚ್ಚಿ ಬೀಳಿಸುವ ಅಂಶಗಳು ಬಹಿರಂಗವಾಗಿದೆ.

ರೇಣುಕಾಸ್ವಾಮಿ ಮೇಲೆ ದರ್ಶನ್ ಸ್ನೇಹಿತರು ಹಿಗ್ಗಾ ಮುಗ್ಗಾ ಹಲ್ಲೆ ನಡೆಸಿರುವುದು ವಿಚಾರಣೆ ವೇಳೆ ಬಹಿರಂಗವಾಗಿತ್ತು. ರೇಣುಕಾಸ್ವಾಮಿ ಮೃತದೇಹದ ಮೇಲೂ ಸಿಕ್ಕಾಪಟ್ಟೆ ಗಾಯಗಳಿತ್ತು. ಅಲ್ಲದೆ, ಸಿಗರೇಟ್ ನಿಂದ ಸುಟ್ಟ ಕಲೆಗಳಿತ್ತು. ದವಡೆ ಕಿತ್ತುಕೊಂಡು ಬಂದಿತ್ತು.

ಇದೀಗ ಮರಣೋತ್ತರ ಪರಿಕ್ಷೆಯಲ್ಲೂ ದರ್ಶನ್ ಮತ್ತು ಸ್ನೇಹಿತರ ಹಲ್ಲೆಯ ತೀವ್ರತೆ ಎಷ್ಟಿತ್ತೆಂದು ಬಹಿರಂಗವಾಗಿದೆ. ಮರಣೋತ್ತರ ಪರೀಕ್ಷಾ ವರದಿ ಪ್ರಕಾರ ಮರ್ಮಾಂಗಕ್ಕೆ ಒದ್ದ ಕಾರಣ ತೀವ್ರ
ರಕ್ತಸ್ರಾವವಾಗಿದೆ. ಅಲ್ಲದೆ ಹೊಟ್ಟೆಯಲ್ಲೂ ಆಂತರಿಕ ರಕ್ತಸ್ರಾವವಾಗಿದೆ. ರೇಣುಕಾಸ್ವಾಮಿ ಸಾವಿಗೆ ಇದೇ ಮುಖ್ಯ ಕಾರಣ ಎಂದು ತಿಳಿದುಬಂದಿದೆ. ಹೃದಯದ ಭಾಗಕ್ಕೆ ಪಂಚ್ ಮಾಡಲಾಗಿದೆ. ಪರಿಣಾಮ ಎದೆಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದೆ. ಆತನ ಕಾಲು ಹಿಡಿದು ತಲೆಯನ್ನು ಗೋಡೆಗೆ ಗುದ್ದಲಾಗಿದ್ದು ಪರಿಣಾಮ ಮೆದುಳಿನಲ್ಲೂ ರಕ್ತಸ್ರಾವವಾಗಿದೆ. ಬೆಲ್ಟ್, ಮರದ ತುಂಡು ಅಥವಾ ರಾಡ್ ನಂತಹ ಬಲವಾದ ಆಯುಧದಿಂದ ಹೊಡೆದು ಹಲ್ಲೆ ನಡೆಸಿರುವುದು ಸ್ಪಷ್ಟವಾಗಿದೆ.

ಮರಣೋತ್ತರ ವರದಿಯಲ್ಲಿ ದೇಹದ 15 ಕಡೆ ಗಾಯವಾಗಿರುವುದು ಕನ್ ಫರ್ಮ್ ಆಗಿದೆ. ಇದಕ್ಕೆ ಮೊದಲು ಮೈಮೇಲೆ ಆಗಿದ್ದ ಗಾಯಗಳು ನಾಯಿ ಕಚ್ಚಿದ್ದರಿಂದ ಆಗಿದ್ದು ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಆದರೆ ಈಗ ಮರಣೋತ್ತರ ವರದಿಯಲ್ಲೇ ಹಲ್ಲೆ ನಡೆಸಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments