Publish Date: Sunday, 28 November 2021 (15:23 IST)
Updated Date: Sunday, 28 November 2021 (15:28 IST)
ಟೀಮ್ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೊ ವತಿಯಿಂದ ಅಪ್ಪು ಅಗಲಿದ ಒಂದು ತಿಂಗಳ ನೆನಪಿಗಾಗಿ ಭಾನುವಾರ ಏರ್ಪಡಿಸಿದ್ದ ರೈಡ್ ಫಾರ್ ಅಪ್ಪು ಬೈಕ್ ಮೆರವಣಿಗೆಗೆ ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಸ್ವಾತಂತ್ರ್ಯ ಉದ್ಯಾನದಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ತಿಳಿಸಿಕೊಡುವ ವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಸಚಿವ ಅಶ್ವತ್ಥ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.