ನಿರ್ಗಮಿಸುವ ಮುನ್ನ ಮೈಸೂರಿಗೆ ಥ್ಯಾಂಕ್ಸ್ ಹೇಳಿದ ರೋಹಿಣಿ ಸಿಂಧೂರಿ

Webdunia
ಸೋಮವಾರ, 7 ಜೂನ್ 2021 (08:50 IST)
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಿರ್ಗಮಿಸುವ ಮುನ್ನ ಮೈಸೂರು ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.


ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜೊತೆಗಿನ ಜಟಾಪಟಿ ಬಳಿಕ ಇಬ್ಬರೂ ಅಧಿಕಾರಿಗಳನ್ನೂ ಸರ್ಕಾರ ವರ್ಗಾವಣೆ ಮಾಡಿ ವಿವಾದಕ್ಕೆ ಅಂತ್ಯ ಹಾಡಿತ್ತು. ಈ ನಡುವೆ ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡದಂತೆ ಮನವಿ ಮಾಡಿದ್ದರು. ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಕೆಲಸ ಅರ್ಧಕ್ಕೇ ಬಾಕಿಯಾದಂತಾಗುತ್ತದೆ. ಹೀಗಾಗಿ ವರ್ಗಾವಣೆ ಸದ್ಯಕ್ಕೆ ತಡೆಯಿರಿ ಎಂದು ಮನವಿ ಮಾಡಿದ್ದರು.

ಆದರೆ ಈಗಾಗಲೇ ವರ್ಗಾವಣೆ ಆದೇಶ ನೀಡಿಯಾಗಿರುವುದರಿಂದ ಸದ್ಯಕ್ಕೆ ಧಾರ್ಮಿಕ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ನಿರ್ಗಮಿಸುವ ಮುನ್ನ ‘ಕಷ್ಟದ ಪರಿಸ್ಥಿತಿಯಲ್ಲೂ ಉತ್ತಮ ಕೆಲಸ ಮಾಡಿದ್ದೇನೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಲು ಅವಕಾಶ ಕೊಟ್ಟ ಎಲ್ಲರಿಗೂ ಹಾಗೂ ಮೈಸೂರಿನ ಜನತೆಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ಮುಂದಿನ ಸುದ್ದಿ
Show comments