Webdunia - Bharat's app for daily news and videos

Install App

ಬಿಡಿಎನಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಲೋಕಾಯುಕ್ತ ಕಚೇರಿಗೆ ದೂರು

Webdunia
ಶುಕ್ರವಾರ, 10 ಫೆಬ್ರವರಿ 2023 (19:07 IST)
ಭ್ರಷ್ಟಾಚಾರದ ಕೂಪವೆಂಬಂತೆ ಬಿಂಬಿತವಾಗಿರುವ ಬಿಡಿಎ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ನೇತೃತ್ವದ ತಂಡ ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ನೀಡಿದೆ. ದಾಖಲೆಗಳನ್ನ ವಶಪಡಿಸಿಕೊಂಡ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಬಿಡಿಎನಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಲೋಕಾಯುಕ್ತ ಕಚೇರಿಗೆ ಸಾಲು-ಸಾಲು ದೂರುಗಳು ಬಂದಿದ್ದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ನೇತೃತ್ವದ ಆರು ತಂಡವಿರುವ 35 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ನೇತೃತ್ವದ ತಂಡ ದಾಳಿ ನಡೆಸಿ ಮಹತ್ವದ ದಾಖಲಾತಿ ವಶಕ್ಕೆ ಪಡೆದುಕೊಂಡಿದೆ. ಬಿಡಿಎ ಪ್ರಧಾನ ಕಚೇರಿ ಸೇರಿ ನಗರದಲ್ಲಿರುವ ವಿವಿಧ ಉಪ ಬಿಡಿಎ ಕಚೇರಿಗಳ ಮೇಲೆ ದಾಳಿ ನಡೆಸಿ ಎಸಿಬಿಯು ಕಳೆದ ವರ್ಷ ರಚನೆಯಾಗಿ ಬಲವರ್ಧನೆಗೊಂಡಿದ್ದ ಲೋಕಾಯುಕ್ತರಿಗೆ ತನಿಖಾ ವರದಿ ನೀಡಿತ್ತು‌. ಈ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬಂದಿದ್ದರಿಂದ ದಾಳಿ ನಡೆಸಲಾಗಿದೆ‌.
 
 ಸಾರ್ವಜನಿಕರಿಂದ ಎಲ್ಲಾ ರೀತಿಯ ದೂರುಗಳು ಬಂದಿದ್ದು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದು ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ನೀಡಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಹೇಳಿದರು.ಬಿಡಿಎನಲ್ಲಿರುವ ನಗರ ಯೋಜನಾ ವಿಭಾಗ, ಎಂಜಿನಿಯರಿಂಗ್, ಭೂಸ್ವಾಧೀನ ಹಾಗೂ ಪರಿಹಾರ ಮತ್ತು ಸೈಟ್ ಪ್ಲಾನಿಂಗ್ ವಿಭಾಗಗಳ ಮೇಲೆ ದಾಳಿ ನಡೆಸಲಾಗಿದೆ‌‌. 
ಬೇರೆಯವರಿಗೆ ನೋಂದಣಿಯಾಗಿರುವ ನಿವೇಶನ ಮಾರಾಟ, ಪರಿಹಾರ ವಿತರಿಸಲು ವಿಳಂಬ, ಸೈಟು ಪ್ಲಾನಿಂಗ್ ಪಡೆಯಲು ಲಂಚ ಹೀಗೆ ತರಹೇವಾರಿ ದೂರುಗಳು ಕೇಳಿಬಂದಿದ್ದರಿಂದ ಈ ದಾಳಿ ನಡೆಸಲಾಗಿದೆ‌.ಬಿಡಿಎ ಕಚೇರಿ ದಾಳಿ ಸಂಬಂಧ ಸ್ಥಳಕ್ಕೆ ಇದೇ ಮೊದಲ ಬಾರಿಗೆ ಖುದ್ದು ಸ್ಥಳಕ್ಕೆ ಬಂದು ಲೋಕಾಯುಕ್ತ ಬಿ‌.ಎಸ್.ಪಾಟೀಲ್ ಬಂದು ಪರಿಶೀಲನೆ ನಡೆಸಿದರು.‌ ದಾಳಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು. ಆಗಿರುವ ಅಕ್ರಮ ಬಗ್ಗೆ ಇಂಚಿಂಚೂ ಮಾಹಿತಿ ಪರಿಶೀಲಿಸಿ‌ ವರದಿ ನೀಡಬೇಕು. ಯಾವ ವಿಭಾಗದಲ್ಲಿ ದೂರುದಾರರಿಗೆ ವಂಚನೆಯಾಗಿದೆ.. ಈ ಬಗ್ಗೆ ದೂರುದಾರರನ್ನು ಸಂಪರ್ಕಿಸಿ ಹೇಳಿಕೆ ಪಡೆದುಕೊಳ್ಳಿ. ಸಾರ್ವಜನಿಕರಿಂದ ಆಗಿರುವ ಅನ್ಯಾಯ ಮುಂದೆ ಆಗಬಾರದು.. ರಾತ್ರಿ 12 ಗಂಟೆಯಾದರೂ ಪರ್ವಾಗಿಲ್ಲ.. ಕೂಲಂಕುಷವಾಗಿ ಪರಿಶೀಲಿಸಿ ದಾಳಿ ಮುಕ್ತಾಯಗೊಳಿಸಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತರು ತಾಕೀತು ಮಾಡಿದರು.ಒಟ್ಟಿನಲ್ಲಿ ಒಂದಾಲ್ಲ ಒಂದು ವಿವಾದಗಳಿಂದ ಸದಾ ಸುದ್ದಿಯಲ್ಲಿರುವ ಬಿಡಿಎ ಯ ಕರ್ಮಕಾಂಡ ಯಾವಾಗ ಮುಗಿಯುತ್ತೋ ಅ ಭಗವಂತನೇ ಬಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments