Webdunia - Bharat's app for daily news and videos

Install App

ನಟಿ ಚಂದನಾ ರಾಘವೇಂದ್ರರಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟ್ಸ್‌ & ಕ್ರಾಫ್ಟ್‌ ಮೇಳಕ್ಕೆ ಚಾಲನೆ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (20:04 IST)
ಬೆಂಗಳೂರು ಸೆಪ್ಟೆಂಬರ್ 17: ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌ ನಿಂದ ನಿಂತ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರಿಗೆ ಉತ್ತಮ ಶಾಪಿಂಗ್ ನ ಅವಕಾಶ ದೊರಕಿಸಿಕೊಡುವ ಸೆಪ್ಟೆಂಬರ್ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಬೆಂಗಳೂರು ಆರ್ಟ್ಸ್ ಕರಕುಶಲ ವಾಹನಗಳ ಮಾರಾಟ ಮತ್ತು ಮಾರಾಟ ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ ಇಂದು ನಟಿ ಚಂದನ ರಾಘವೇಂದ್ರ ಚಾಲನೆಯಲ್ಲಿರುವ ಸಮಯ. 
 
ಕರೋನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರ ಶಾಪಿಂಗ್‌ ಥೆರಪಿಗೆ ಬೇಕಾಗಿರುವ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು. 
 
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಿದೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‌ಲೂಮ್‌ಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‌ಗಳು, ಪಿಂಗಾಣಿ ವಸ್ತುಗಳು ಹೊಂದಿರುವ ಹಲವಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿವೆ.
ಜೀವನಶೈಲಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments