Publish Date: Sat, 23 Jan 2021 (10:27 IST)
Updated Date: Sat, 23 Jan 2021 (10:29 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಆಪ್ತೆ ಶಶಿಕಲಾ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಎರಡು ದಿನದ ಹಿಂದೆ ಉಸಿರಾಟ ಸಮಸ್ಯೆ, ರಕ್ತದೊತ್ತಡ ಏರಿಕೆ, ಜ್ವರದಿಂದಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.