ಕಳೆದ 24 ಗಂಟೆಯಿಂದ ನಡೆಯುತ್ತಿರುವ ವಿದ್ಯಮಾನ-ಸತ್ಯಂಶ

Webdunia
ಶುಕ್ರವಾರ, 2 ಜುಲೈ 2021 (20:48 IST)
ಕಳೆದ 24 ಗಂಟೆಯಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನಲೆಲಿ ಎರಡು ಮಾತು, ವಾಸ್ತವ ಸಂಗತಿ ಹಾಗೂ ಸತ್ಯಂಶವನ್ನ ನಿಮ್ಮ ಮುಂದೆ ಹಂಚಿಕೊಳ್ಳುತ್ತಿದ್ದೇನೆ.ಸುಮಾರು 20 ವರ್ಷಗಳಿಂದ ಸಚಿವ ಮಾನ್ಯ 
ಬಿ.ಶ್ರೀರಾಮುಲು ಅವರ ನೆರಳಲ್ಲಿ ಬದುಕುತ್ತಿದ್ದೇವೆ. ಸಚಿವರ ಪ್ರಾಮಾಣಿಕ ಜನಸೇವೆಲಿ ನೂರಾರು ಮಂದಿ ಅಳಿಲು ಸೇವೆ ಸಲ್ಲಿಸುತ್ತಿದ್ದು, ಅವರಲ್ಲಿ ಒಬ್ಬನಾಗಿ ನಾನು ಸೇವೆ ಸಲ್ಲಿಸುತ್ತಿದ್ದೇನೆ.ಶ್ರೀರಾಮುಲು ಅವರಿಗಾಗಲಿ, ಮತ್ಯಾರಿಗೆ ಆಗಲಿ ಕಳಂಕ ತರುವ ಕೆಲಸ ಎಂದೂ ಮಾಡಿಲ್ಲ, ಮುಂದೆ ಮಾಡುವುದು ಇಲ್ಲ. ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ ವೈ ವಿಜಯೇಂದ್ರ ಅವರ ಕುರಿತ ಯಾವುದೇ ಆಡಿಯೋದಲ್ಲಿ ನಾನು ಭಾಗಿಯಾಗಿಲ್ಲ.ಪೊಲೀಸರು ಈ ಕುರಿತು ವಿಚಾರಣೆ ಕರೆದುಕೊಂಡು ಹೋಗಿದ್ದು, ವಿಚಾರಣೆ ವೇಳೆ ನನ್ನದು ಎನ್ನಲಾದ ಆಡಿಯೋ ಕೇಳಿಸಿದ್ದು, ಅದು ನನ್ನದಲ್ಲ ಎಂದು ನನ್ನ ಧ್ವನಿಯಿಂದ ಗೊತ್ತಾಗಿದೆ. ನನ್ನ ಕುರಿತ ಸತ್ಯಂಶ ಅವರಿಗೆ ಮನವರಿಕೆಯಾಗಿದೆ. ನನ್ನ ವಾಯ್ಸ್ ಸ್ಯಾಂಪಲ್ ಗಳನ್ನು ಪಡೆದಿದ್ದು, ಸತ್ಯಾಂಶ ಖಾತ್ರಿ ಪಡಿಸಿಕೊಳ್ಳಲು ಅವರ ಬಳಿಯಿರುವ ಆಡಿಯೋ ಜೊತೆ ಪರೀಕ್ಷೆಗೆ ಒಳಪಡಿಸಿದ್ದಾರೆ. ಅಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ ಎಂದು ಪ್ರಾಥಮಿಕ ತನಿಖೆಲಿ ಮನವರಿಕೆಯಾಗಿದೆ. ಇವುಗಳನ್ನು FSLಗೂ ಕಳುಹಿಸಿಕೊಡಲಾಗಿದೆ.ಮತ್ತೆ ಹೇಳುವೆ..ಸಚಿವರ ಸೇವೆಯಲ್ಲಿ ಪ್ರಾಮಾಣಿಕವಾಗಿ ಅಳಿಲು ಸೇವೆ ಸಲ್ಲಿಸಲು ಬಂದವರಲ್ಲಿ ನಾನು ಒಬ್ಬ.ಕಳೆದ ಒಂದು ದಿನದಿಂದ ಈಚೆಗೆ ನಡೆದ ಬೆಳವಣಿಗೆಗಳು ಹಾಗೂ ವರದಿಗಳು ಸತ್ಯಕ್ಕೆ ದೂರವಾಗಿದ್ದು, ನಾನು ಆಘಾತಕ್ಕೆ ಒಳಗಾಗಿದ್ದೇನೆ, ನನ್ನ ಕುಟುಂಬವೂ ನೋವಿನಲ್ಲಿ ಇದೆ.ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ಅವರು ದೂರು ಸಲ್ಲಿಸುವ ಮುನ್ನ,  ನನ್ನನು ಕರೆಯಿಸಿ ಮಾತನಾಡಿದ್ದಿದ್ದರೆ, ವಾಸ್ತವಾಂಶ ಹಾಗೂ ಸತ್ಯಾಸತ್ಯತೆ ಗೊತ್ತಾಗಿರುತ್ತಿತ್ತು. 
 
ಈ ಪ್ರಕರಣದಲ್ಲಿ ನಾನು ಭಾಗಿಯಲ್ಲ, ಯಾವುದೇ ತಪ್ಪು ಮಾಡಿಲ್ಲ. ನಾನು ಜೀವನಕ್ಕೆ ಕಷ್ಟ ಪಟ್ಟು ದುಡಿದುಕೊಂಡು ಬದುಕುವ ವ್ಯಕ್ತಿ. ಅಡ್ಡದಾರಿ ಹಿಡಿಯುವವನಲ್ಲ.ಬದುಕಿಗಾಗಿ ಕಷ್ಟಪಟ್ಟು ದುಡಿಯುತ್ತೇವೆ ಹೊರತು
ಅಡ್ಡದಾರಿ ಹಿಡಿದು ಬದುಕುವವರಲ್ಲ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಸಿಇಟಿ ಪರೀಕ್ಷೆ ವೇಳೆ ಮತ್ತೆ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments