Select Your Language

Notifications

webdunia
webdunia
webdunia
webdunia

ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ ಸವದತ್ತಿ ಬಿಜೆಪಿ ಅಭ್ಯರ್ಥಿ

ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ ಸವದತ್ತಿ ಬಿಜೆಪಿ ಅಭ್ಯರ್ಥಿ
ಬೆಳಗಾವಿ , ಶನಿವಾರ, 22 ಏಪ್ರಿಲ್ 2023 (10:21 IST)
ಬೆಳಗಾವಿ : ನಾಮಪತ್ರ ಸಲ್ಲಿಕೆ ವೇಳೆ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಯಡವಟ್ಟು ಮಾಡಿಕೊಂಡು ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ಅಧಿಕಾರಿಗಳು ಸಮಯ ನೀಡಿದ್ದು, ಚೆಂಡು ಈಗ ಸವದತ್ತಿ ಆರ್ಓ ಅಂಗಳದಲ್ಲಿದೆ.
 
ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಫಾರಂ ನಂಬರ್ 29ರ ನಮೂನೆ 2019ರಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ 2018ರ ನಮೂನೆ ತುಂಬಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯ ಬಳಿಕ ಏ.20ರ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಸಹ ಕಾನೂನು ಬಾಹಿರ ಎಂದು ಕಾಂಗ್ರೆಸ್, ಆಪ್ ಆರೋಪಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ದೌರ್ಜನ್ಯಕ್ಕೆ ವೀರ್ಯ ಸ್ಖಲನವಾಗಿರಲೇ ಬೇಕಿಲ್ಲ : ಆಂಧ್ರ ಹೈಕೋರ್ಟ್