Webdunia - Bharat's app for daily news and videos

Install App

ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ: ಆರ್‌ ಅಶೋಕ್‌ ಪ್ರಶ್ನೆ

Sampriya
ಸೋಮವಾರ, 27 ಜನವರಿ 2025 (17:41 IST)
ಬೆಂಗಳೂರು: 2024-25 ನೇ ಆರ್ಥಿಕ ವರ್ಷ ಮುಗಿಯಲು ಇನ್ನು ಕೇವಲ 2 ತಿಂಗಳು ಬಾಕಿ ಉಳಿದಿದ್ದರೂ SCSP/TSP ಯೋಜನೆಯ ಕಾರ್ಯಕ್ರಮಗಳ ಅಡಿಯಲ್ಲಿ ಹಂಚಿಕೆ ಮಾಡಬೇಕಾದ ₹16,429 ಕೋಟಿ ಹಣವನ್ನ ಬಿಡುಗಡೆ ಮಾಡದೆ ಸಈ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಸಚಿವ ಸಿ ಮಹಾದೇವಪ್ಪನವರೇ, ಬರುವ ತಿಂಗಳು 2025-26ನೇ ಸಾಲಿನ ಬಜೆಟ್ ಮಂಡನೆ ಆಗಬೇಕಿದೆ. ಇನ್ನೆರಡು ತಿಂಗಳಲ್ಲಿ ಹೊಸ ಆರ್ಥಿಕ ವರ್ಷ ಜಾರಿಗೆ ಬರಲಿದೆ. ಆದರೆ ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆಯಾದ ಶೇ. 41.46% SCSP/TSP ಅನುದಾನವನ್ನೇ ಇನ್ನೂ ಬಿಡುಗಡೆ
ಮಾಡಿಲ್ಲ ಅಂದರೆ ಅದನ್ನು ಬಿಡುಗಡೆ ಮಾಡುವುದು ಯಾವಾಗ? ಖರ್ಚು ಮಾಡುವುದು ಯಾವಾಗ? ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಸುಮ್ಮನೆ ಕಾಟಾಚಾರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡುವುದಾದರೂ ಯಾತಕ್ಕೆ? ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ?

ಇದೇನಾ ತಮ್ಮ ನಾಯಕ ಸಿಎಂ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ಸಿದ್ದರಾಮಯ್ಯನವರು ಮತ್ತು ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ?

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನ ಲೂಟಿ ಹೊಡೆಯುತ್ತೀರಿ, ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ. ತಮಗೆ ಮತ್ತು ತಮ್ಮ ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಅನ್ನುವುದು ಇದ್ದರೆ ಇನ್ನು ಮುಂದೆ ಬುದ್ಧ, ಬಸವ, ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ರಾಜಕೀಯ ಮಾಡಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments