Publish Date: Tue, 06 Sep 2022 (15:53 IST)
Updated Date: Tue, 06 Sep 2022 (16:59 IST)
ಮಳೆಯಿಂದಾಗಿ ನಗರದ ರಸ್ತೆಗಳ ಮೇಲೆ ನೀರು ನಿಂತಿದೆ. ನೀರು ಕಡಿಮೆಯಾಗದ ಹಿನ್ನೆಲೆಯಲ್ಲಿ ರಸ್ತೆಗಳ ಮೇಲೆ ಸಂಚಾರ ದುಸ್ತರವಾಗಿದೆ. ಇಂದೂ ಮಳೆಯಾಗಬಹುದು ಎಂಬ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನಗರದ ಮಹದೇವಪುರ, ಬೊಮ್ಮ ನಹಳ್ಳಿ, ಕೃಷ್ಣರಾಜಪುರ (ಕೆಆರ್ ಪುರಂ) ಮತ್ತು ಮಂಡೂರು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ
ಮಾರತ್ತಹಳ್ಳಿ-ಸರ್ಜಾಪುರ ರಿಂಗ್ರೋಡ್ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಿಂಗ್ರೋಡ್ನಲ್ಲಿ ಲಘು ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ಬೆಂಗಳೂರಿನ ಔಟರ್ ರಿಂಗ್ ರೋಡ್ನಲ್ಲಿ ಸಿಲುಕಿದ್ದ ಬೆಂಜ್ ಕಾರ್ನಲ್ಲಿ ಮೂವರು ಹೊರಬರಲು ಪರದಾ ಡಿದರು. ಸಹಾಯ ಮಾಡುವಂತೆ ಸವಾರರು ಕೂಗುತ್ತಿರುವ ಘಟನೆ ಮಾರತ್ತಹಳ್ಳಿಯ ಔಟರ್ ರಿಂಗ್ ರೋಡ್ನಲ್ಲಿ ನಡೆದಿದೆ. ಮಳೆಯಿಂ ದಾಗಿ ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್ರೋಡ್ಗಳಲ್ಲಿ ನೀರು ನಿಂತಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದೂ ಸಹ ಟ್ರಾಫಿಕ್ ಜಾಮ್ ಆಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.