ಆರತಿ ಬೆಳಗಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಗತ!

Webdunia
ಸೋಮವಾರ, 23 ಆಗಸ್ಟ್ 2021 (18:37 IST)
ರಾಜ್ಯ ಸರ್ಕಾರ ಇಂದಿನಿಂದ 9-10 ಮ
ತ್ತು ಪ್ರಥಮ - ದ್ವಿತೀಯ ಪಿಯುಸಿ ತರಗತಿಗಳನ್ನ ಆರಂಭಿಸಲು ಆದೇಶಿಸಿರುವ  ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಪ್ರಾರಂಭಿಸಲಾಗಿದೆ.
ರಾಯಚೂರು ತಾಲೂಕಿನ ಸರ್ಕಾರ ಪ್ರೌಢ ಶಾಲೆಯಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಕ್ ತನ್ವೀರ್ ಆಸೀಫ್ ವಿದ್ಯಾರ್ಥಿಗಳಿಗೆ ಹೂಗುಚ್ಛ ಪುಸಕ್ತಗಳನ್ನ ನೀಡಿ ಸ್ವಾಗತಿಸಿದ್ದರೆ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಆರತಿ ಬೆಳಗುವ ಮೂಲ ತರಗತಿಗಳಿಗೆ ಬಾರ ಮಾಡಿಕೊಂಡರು.
ಸರ್ಕಾರದ ನಿರ್ದೇಶನ್ವಯ ಕೋವಿಡ್ ಹಿನ್ನಲೆಯಲ್ಲಿ ಮೊದಲೇ ಶಾಲಾ ಕೊಠಡಿಗಳಿಗೆ ಸ್ಯಾನಿಟೈಷನ್ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಪಾಲಕರ ಒಪ್ಪಿಗೆ ಪತ್ರ ಪಡೆದುಕೊಂಡು ಬಂದವರಿಗೆ ಮಾತ್ರ ತರಗತಿಗೆ ಹಾಜರಾಗಲು ಅವಕಾಶವನ್ನ ನೀಡಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಸರ್ಕಾರಿ, ಅನುದಾನಿ, ಅನುದಾನ ರಹಿತ ಶಾಲಾಗಳನ್ನ ಸೇರಿದಂತೆ ಒಟ್ಟು 449 ಪ್ರೌಢಶಾಲೆಗಳನ್ನ ಆರಂಭಿಸಲಾಗುತ್ತಿದೆ.
ಈಗಾಗಲೇ ಶಿಕ್ಷಣ ಇಲಾಖೆಯಿಂದ ಅಗತ್ಯ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಮಾಸ್ಕ್ ಧರಿಸಿಕೊಂಡು ಬರಬೇಕಾಗಿದ್ದು, ಪಾಲಕರ ಒಪ್ಪಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ತರಗತಿಗಳಿಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಕತೆಯಿಂದ ಬರುತ್ತಿದ್ದಾರೆ ಎಂದರು.
ಈ ವೇಳೆ ಸಿಇಒ ಜಿ.ಪಂ. ಶೇಕ್ ತನ್ವೀರ್ ಆಸೀಫ್, ಡಿಡಿಪಿಐ, ಬಿಇಒ ಚಂದ್ರಶೇಖರ್ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು, ಗ್ರಾಮಸ್ಥರು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಮುಂದಿನ ಸುದ್ದಿ
Show comments