ಬೆಂಗಳೂರಲ್ಲಿ ಶಾಲೆಗಳು ಬಂದ್

Webdunia
ಶುಕ್ರವಾರ, 21 ಜನವರಿ 2022 (16:10 IST)
ಕರ್ನಾಟಕದಲ್ಲಿ ಮಕ್ಕಳಲ್ಲಿ ಕೊವಿಡ್-19 ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಶಾಲೆಗಳನ್ನು ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ನಂತರ ಮಾತನಾಡಿರುವ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಕೊವಿಡ್-19 ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಜನವರಿ 29ರವರೆಗೂ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದರು.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕುರಿತು ಜಿಲ್ಲಾವಾರು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು. ಮಕ್ಕಳಲ್ಲಿ ಕೊವಿಡ್-19 ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿದೆ. ಈ ಹಿನ್ನೆಲೆ ಎಲ್ಲ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಇದರ ಹೊರತಾಗಿ ಶಾಲೆಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾದರೆ 3 ರಿಂದ 7 ದಿನಗಳವರೆಗೆ ಶಾಲೆಗಳನ್ನು ಬಂದ್ ಮಾಡಿ, ತದನಂತರ ಎಂದಿನಂತೆ ಪುನಾರಂಭಿಸಲಾಗುವುದು ಎಂದು ತಿಳಿಸಿದರು.
 
ಮಕ್ಕಳಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ದರ:
 
ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 40 ಸಾವಿರದ ಗಡಿ ದಾಟಿದೆ. ಇದರ ಮಧ್ಯೆಯೂ ಮಕ್ಕಳಲ್ಲಿ ಸೋಂಕಿನ ಪಾಸಿಟಿವಿಟಿ ದರ ತೀರಾ ಕಡಿಮೆಯಾಗಿದೆ. 5 ರಿಂದ 12 ವರ್ಷ ವಯೋಮಾನದ 5.33,144 ಮಕ್ಕಳನ್ನು ಕೊವಿಡ್-19 ಸೋಂಕಿನ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವಿಟಿ ದರ ಶೇ.5.94ರಷ್ಟು ಇರುವುದು ಪತ್ತೆಯಾಗಿದೆ. ಬೆಂಗಳೂರು ನಗರದಲ್ಲಿ ಈ ವಯೋಮಾನದ ಮಕ್ಕಳ ಕೊರೊನಾವೈರಸ್ ಪಾಸಿಟಿವಿಟಿ ದರವು ಶೇ.14.12ರಷ್ಟಿದೆ. ಮೈಸೂರು, ತುಮಕೂರು, ಹಾಸನ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಾತ್ರ ಪಾಸಿಟಿವಿಟಿ ದರ ಶೇ.9ಕ್ಕಿಂತ ಹೆಚ್ಚಾಗಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments