Select Your Language

Notifications

webdunia
webdunia
webdunia
webdunia

ಭದ್ರತಾ ಲೋಪ : ಪ್ರಧಾನಿ ವಾಹನದ ಬಳಿ ನುಗ್ಗಲು ಯತ್ನಿಸಿದ ಯುವಕ

ಭದ್ರತಾ ಲೋಪ : ಪ್ರಧಾನಿ ವಾಹನದ ಬಳಿ ನುಗ್ಗಲು ಯತ್ನಿಸಿದ ಯುವಕ
ದಾವಣಗೆರೆ , ಭಾನುವಾರ, 26 ಮಾರ್ಚ್ 2023 (07:29 IST)
ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಉಂಟಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಎಸ್ಪಿ ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ.

ಹೆಲಿಪ್ಯಾಡ್ ನಿಂದ ಪ್ರಧಾನಿಯವರು ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಮೋದಿ ವಾಹನದ ಬಳಿ ನುಗ್ಗಲು ಯತ್ನಿಸಿದ್ದಾನೆ. ತಕ್ಷಣವೇ ಯುವಕನನ್ನು ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಎಸ್ಪಿಜಿ ಅಧಿಕಾರಿಗಳು ತಡೆದಿದ್ದಾರೆ.

ಬಳಿಕ ಆತನನ್ನು ತಡೆದು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ. ಮೋದಿ ವಾಹನದ ಬಳಿ ನುಗ್ಗಿದ ಯುವಕ ಕೊಪ್ಪಳ ಭಾಗದ ಬಿಜೆಪಿ ಕಾರ್ಯಕರ್ತ ಎಂಬ ಮಾಹಿತಿ ಲಭಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನನ್ನ ಸಮಾಧಿ ಬಯಸುತ್ತಿದೆ : ನರೇಂದ್ರ ಮೋದಿ