Webdunia - Bharat's app for daily news and videos

Install App

ಸಿಎಂ ಮಮತಾ ಬ್ಯಾನರ್ಜಿ ಪಾದ ಮುಟ್ಟಿ ನಮಸ್ಕರಿಸಿದ ಶಾರುಕ್ ಖಾನ್

Webdunia
ಶುಕ್ರವಾರ, 3 ನವೆಂಬರ್ 2023 (19:14 IST)
ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ ಶಾರುಕ್ ಖಾನ್, ಸಿಎಂ ಬ್ಯಾನರ್ಜಿಯವರ ಕಾಲು ಮುಟ್ಟಿ ನಮಸ್ಕರಿಸಿದಾಗ ಅವರ ನಡುವಿನ ವಿಶೇಷ ಸಂಬಂಧ ನೆರೆದಿದ್ದ ಜನತೆಗೆ ಸ್ಪಷ್ಟವಾಗಿತ್ತು. ಸಹೋದರನಿಗೆ ಬೀಳ್ಕೋಡುವಂತೆ ದೀದಿ, ಶಾರುಕ್‌ರನ್ನು ನೋಡಿಕೊಂಡಿರುವುದು ನೆರೆದಿದ್ದವರಲ್ಲಿ ಸಂತಸದ ಸಂಭ್ರಮ ಕಂಡು ಬಂದಿತು.
 
ಕೋಲ್ಕತಾಗೆ ಆಗಮಿಸಿದ್ದ ಶಾರುಕ್‌ಗೆ, ಕಾರ್ಯಕ್ರಮ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದು ಬೇರೆ ಯಾರು ಅಲ್ಲ. ಸ್ವತಃ ಸಿಎಂ ಬ್ಯಾನರ್ಜಿ. ಶಾರುಕ್ ಖಾನ್ ದೀದಿಯ ಸ್ಯಾಂಟ್ರೋ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ವಿಡಿಯೋ ವೈರಲ್ ಆಗಿದೆ.
 
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಾಲಿವುಡ್ ಸೂಪರ್‌ಸ್ಟಾರ್ ಶಾರುಕ್ ಖಾನ್ ಮಧ್ಯ ಸಹೋದರಿ, ಸಹೋದರನ ಅನ್ಯೋನ್ಯವಾದ ಸಂಬಂಧವಿದೆ. ನಗರಕ್ಕೆ ಬಂದಾಗಲೆಲ್ಲಾ ಮಮತಾ ಬ್ಯಾನರ್ಜಿ(ದೀದಿ)ಯನ್ನು ಭೇಟಿ ಮಾಡುವ ಶಾರುಕ್‌ಗೆ ಕೋಲ್ಕತಾ ಎರಡನೇ ತವರುಮನೆಯಾಗಿ ಹೊರಹೊಮ್ಮಿದೆ.
 
ಪ್ರಪಂಚದಲ್ಲಿರುವ ಎಲ್ಲಾ ಐಷಾರಾಮಿ ಸೌಲಭ್ಯ ಹೊಂದಿರುವ ಶಾರುಕ್, ಒಂದು ಸಣ್ಣ ಕಾರಿನಲ್ಲಿ ದೀದಿಯೊಂದಿಗೆ ಪ್ರಯಾಣಿಸಿರುವುದು ನಿಜಕ್ಕೂ ಆಶ್ಚರ್ಯಕರವಾಗಿದೆ.
 
ಒಂದು ಸಣ್ಣ ಕಾರಿನಲ್ಲಿ ಎಸ್‌ಆರ್‌ಕೆ ಸವಾರಿ ಮಾಡಿ ಎಷ್ಟು ಕಾಲವಾಗಿದೆಯೋ ಎನ್ನುವಂತೆ ವಿಮಾನ ನಿಲ್ದಾಣದಲ್ಲಿದ್ದ ಜನರು  ಆಸಕ್ತಿಯನ್ನು ತೋರುತ್ತಿದ್ದರು. ಆದರೆ, ಮೌನವಾಗಿ ಮುಂದೆ ಸಾಗಿದ ಶಾರುಕ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದರು ಎನ್ನಲಾಗಿದೆ.
 
ಪ್ರಸಕ್ತ ವರ್ಷದಲ್ಲಿ ನಡೆದ ರಾಖಿ ಹಬ್ಬದಂದು ಟ್ವೀಟ್ ಮಾಡಿದ ಶಾರುಕ್, ಪ್ರತಿ ವರ್ಷ ರಾಖಿ ಹಬ್ಬದಂದು ದೀದಿಯ ಆಶೀರ್ವಾದಕ್ಕಾಗಿ ಕಾಯುತ್ತೇನೆ ಎಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

ಮುಂದಿನ ಸುದ್ದಿ
Show comments