Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಶತ್ರುಭೈರವಿ ಯಾಗ, ಹಾಗಂದರೇನು

Krishnaveni K
ಶುಕ್ರವಾರ, 31 ಮೇ 2024 (10:32 IST)
Photo Credit: X
ಬೆಂಗಳೂರು: ನಮ್ಮನ್ನು ಅಧಿಕಾರದಿಂದ ಕೆಳಗಿಳಿಸಬೇಕೆಂದು ಕೇರಳದಲ್ಲಿ ಶತ್ರುಭೈರವಿ ಯಾಗ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಅಷ್ಟಕ್ಕೂ ಶತ್ರುಭೈರವಿ ಯಾಗ ಎಂದರೇನು ಇಲ್ಲಿದೆ ಮಾಹಿತಿ.

ಕೇರಳದ ತಂತ್ರಿಗಳನ್ನು ಕರೆಸಿ ಕೇರಳದ ರಾಜರಾಜೇಶ್ವರಿ ದೇವಾಲಯದ ನಿರ್ಜನ ಪ್ರದೇಶದಲ್ಲಿ ಯಾಗ ಮಾಡಿಸಲಾಗುತ್ತಿದೆ ಎಂದು ಡಿಕೆಶಿ ಬಾಂಬ್ ಸಿಡಿಸಿದ್ದಾರೆ. ಇದನ್ನು ಯಾರು ಮಾಡಿಸುತ್ತಿದ್ದಾರೆ ಎಂದೂ ಗೊತ್ತು. ಆದರೆ ನಾವು ದೇವರಲ್ಲಿ ನಂಬಿಕೆಯಿರಿಸಿದ್ದೇವೆ. ನಮಗೆ ಏನೂ ಆಗಲ್ಲ ಎಂದಿದ್ದಾರೆ.

ಪುರಾಣಕಾಲದಂದಿಂದಲೂ ಶತ್ರುಭೈರವಿ ಯಾಗಕ್ಕೆ ಅದರದ್ದೇ ಆದ ಪ್ರಾಧಾನ್ಯತೆಯಿದೆ. ಹಿಂದೆ ರಾಜ, ಮಹಾರಾಜರುಗಳು ಶತ್ರುಗಳನ್ನು ಸೋಲಿಸಿ ಸಾರ್ವಭೌಮತ್ವ ಸಾಧಿಸಲು ಭೂಮಂಡಲಾಧೀಶ್ವರರಾಗಲು ಭೈರವಿ ದೇವಿಯ ಆರಾಧನೆ ಮಾಡುತ್ತಿದ್ದರಂತೆ.

ಯಾವುದೇ ಫಲಾಪೇಕ್ಷೆಗಳಿಲ್ಲದ, ತ್ರಿಕರಣ ಶುದ್ಧಿಯುಳ್ಳವರು ಭೈರವಿಯನ್ನು ಸಾತ್ವಿಕ ರೂಪದಲ್ಲಿ ಪೂಜಿಸಿದರೆ ಫಲ ಪಡೆಯುತ್ತಾರೆ ಎಂದು ನಂಬಿಕೆಯಿದೆ. ಆದರೆ ರಾಜಕೀಯ ಮಹತ್ವಾಕಾಂಕ್ಷೆ ಇರುವವರು ಅಘೋರಿ ಪದ್ಧತಿ ಅನುಸರಿಸುತ್ತಾರೆ. ಅದರಂತೆ ಇಲ್ಲಿ ಕುರಿ, ಕೋಣ, ಹಂದಿ, ಕೋಳಿ ಮುಂತಾದ ಪ್ರಾಣಿಗಳನ್ನು ಬಲಿ ನೀಡಲಾಗುತ್ತದೆ. ಅವುಗಳ ಮಾಂಸವನ್ನು ಸಮರ್ಪಣೆ ಮಾಡಲಾಗುತ್ತದೆ.

ಒಂದು ವೇಳೆ ಈ ಕ್ರಮ ಮಾಡುವಾಗ ತಪ್ಪು ನಡೆದಲ್ಲಿ ಮಾಡಿದವರಿಗೂ, ಮಾಡಿಸಿದವರಿಗೂ ತೊಂದರೆ ತಪ್ಪಿದ್ದಲ್ಲ. ವಿಶೇಷವೆಂದರೆ ರಾಜಕಾರಣಿಗಳು ಇಂದಿಗೂ ತಮ್ಮ ಶತ್ರುಗಳನ್ನು ಸೋಲಿಸಿ ಅಧಿಕಾರ ಪಡೆಯಲು ಈ ಯಾಗ ರಹಸ್ಯವಾಗಿ ಮಾಡುತ್ತಾರಂತೆ. ಇದೀಗ ತಮ್ಮ ಮೇಲೆ ಪ್ರಯೋಗಿಸಿರುವುದೂ ಇದೇ ತಂತ್ರ ಎಂದು ಡಿಕೆಶಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments