ಶೀಲಹಳ್ಳಿ ಸೇತುವೆ ಮುಳುಗಡೆ

Webdunia
ಶುಕ್ರವಾರ, 23 ಜುಲೈ 2021 (19:02 IST)
ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಶುರುವಾಗಿದ್ದು, ಶೀಲಹಳ್ಳಿ‌ ಬ್ರಿಡ್ಜ್ ಮುಳಗಡೆಯಾಗಿದೆ. ನಾರಾಯಣಪುರ(ಬಸವಸಾಗರ) ಜಲಾಶಯದಿಂದ ಹೆಚ್ಚುವರಿ ಲಕ್ಷಾಂತರ ಕ್ಯೂಸೆಕ್ಸ್ ನೀರನ್ನ ಕೃಷ್ಣ ನದಿಗೆ ಹರಿದು ಬೀಡಲಾಗಿದೆ. ಇಂದು ಜಲಾಶಯದಿಂದ ೨೯ ಕ್ರಾಸ್ ಗಳಿಂದ ೧.೯೮ ಲಕ್ಷ ಕ್ಯೂಸೆಕ್ಸ್ ನೀರಿನ್ನ ನದಿಗೆ ಹರಿದು ಬಿಡಲಾಗಿದೆ. ಇದರಿಂದಾಗಿ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಬ್ರಿಡ್ಜ್ ಜಲಾವೃತ್ತಗೊಂಡು ಸಂಚಾರ ಸ್ಥಗೀತವಾಗಿದ್ದು, ನಾನಾ ನಡುಗಡ್ಡೆ ಪ್ರದೇಶಗಳಿಗೆ ಸಂಪರ್ಕ ಕಡಿತವಾಗಿದೆ. 
ನಡುಗಡ್ಡೆ ಗ್ರಾಮಗಳಾದ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ನಡುಗಡ್ಡೆ ಪ್ರದೇಶಗಳ ನಿವಾಸಿಗಳಿಗೆ ಜನತೆ ಬಾಹ್ಯ ಸಂಪರ್ಕ ಕಳೆದುಕೊಂಡಿದ್ದಾರೆ. ಕೃಷಿ ಚಟುವಟಿಕೆ, ತೋಟಗಾರಿಕೆ ಕೆಲಸಕ್ಕೆ ಹೋಗುವ ಕೂಲಿಕಾರ್ಮಿಕರು ಸೇತುವೆ ಮುಳುಗಡೆ ಆಗಿದ್ದರಿಂದ ಮನೆಯತ್ತ ವಾಪಸ್ ತೆರಳಿದರು. ಮುಂಜಾಗ್ರತ ಕ್ರಮವಾಗಿ ಪೊಲೀಸ್ ಇಲಾಖೆ  ಸೇತುವೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ, ಸಂಚಾರವನ್ನ ಬಂದ್ ಗೊಳಿಸಲಾಗಿದೆ. ಕೃಷ್ಣಾ ನದಿ ತೀರದಲ್ಲಿ ಬರುವ ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕಿನ ಗ್ರಾಮಗಳಿಗೆ ನದಿಯ ತೀರಕ್ಕೆ ಜನ-ಜಾನುವಾರು ತೆರಳದಂತೆ ಜಿಲ್ಲಾಡಳಿತ ಸಂದೇಶ ನಡೆಸಿದ್ದು, ‌ಪ್ರವಾಹವನ್ನು‌ ನಿಭಾಯಿಸಲು ಅಧಿಕಾರಿಗಳನ್ನ‌, ಸಿಬ್ಬಂದಿಗಳು ನಿಯೋಜನೆ ಮಾಡಲಾಗಿದೆ. ಸದ್ಯ ೧.೯೮ ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟಿದ್ದು, ಇನ್ನೂ ಹೆಚ್ಚಳವಾದರೆ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರಿಡ್ಜ್ ಮುಳುಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments