Publish Date: Sun, 12 Jul 2020 (21:42 IST)
Updated Date: Sun, 12 Jul 2020 (21:43 IST)
ಡೆಡ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳಲ್ಲಿ ಅವಶ್ಯವಿರುವ ಸಿಬ್ಬಂದಿ ಮಾತ್ರ ನಿಯೋಜಿಸಬೇಕು.
ಕಾನ್ಸಟೇಬಲ್ ಗಳಿಗೆ ಪಾಳಿಯಲ್ಲಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಲ್ಲಾ ಆಸ್ಪತ್ರೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಬೇಕೆಂದು ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಠಾಣೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ತಿಳಿಸಿದ್ದಾರೆ.