ಕೋವಿಡ್ ನಿಂದ ಮೃತ ರೈತರ ಸಾಲಮನ್ನಾಗೆ ಇನ್ನೆರಡು ದಿನದಲ್ಲಿ ತೀರ್ಮಾನ: ಸೋಮಶೇಖರ್

Webdunia
ಗುರುವಾರ, 8 ಜುಲೈ 2021 (14:17 IST)
ಕೋವಿಡ್ ನಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡುವ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಲು ಚಿಂತನೆ ನಡೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೊರೊನಾ ವೈರಸ್ ನಿಂದ ಎಷ್ಟು ಜನ ರೈತರು ಮೃತರಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ, ಸಾಲಮನ್ನಾ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ಸಹಕಾರ ಇಲಾಖೆಯ ಸಚಿವಾಲಯ ತೆರೆದಿದ್ದು, ಸಚಿವರನ್ನು ನೇಮಕ ಮಾಡಿದೆ. ಇದುವರೆಗೆ ಸಹಕಾರ ಇಲಾಖೆಗೆ ನೆರವು ಸಿಗುತ್ತಿರಲಿಲ್ಲ. ಇದೀಗ ನೆರವು ದೊರೆಯಲಿದ್ದು, ಅದಕ್ಕಾಗಿ ಪ್ರಧಾನಿ ಅವರನ್ನು ಅಭಿನಂದಿಸುವೆ ಎಂದು ಸೋಮಶೇಖರ್ ತಿಳಿಸಿದರು.
ಸದ್ಯದಲ್ಲೆ ಕೇಂದ್ರದಿಂದ 720 ಕೋಟಿ ಬೆಂಬಲ ಬೆಲೆ ಬಿಡುಗಡೆಯಾಗುತ್ತದೆ. ಕೇಂದ್ರದ ಸಹಕಾರ ಇಲಾಖೆಯಿಂದ ರಾಜ್ಯದ ಸಹಕಾರ ಇಲಾಖೆಗೆ ಯಾವುದೇ ತೊಂದರೆ ಆಗಲ್ಲ. ಪಕ್ಷದ ರಾಜಕೀಯ ವಿಚಾರವನ್ನು ವೇದಿಕೆಯಲ್ಲೇ ಚರ್ಚೆ ಮಾಡುತ್ತೇವೆ. ಬಹಿರಂಗವಾಗಿ ಮಾತನಾಡಬೇಡಿ ಎಂದು ಪಕ್ಷದ ಆದೇಶವಾಗಿದೆ. ಆದ್ದರಿಂದ ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments