Webdunia - Bharat's app for daily news and videos

Install App

ಯುವತಿಗೆ ಪಿಸ್ತೂಲ್ ತೋರಿಸಿ ಅತ್ಯಾಚಾರ

Webdunia
ಸೋಮವಾರ, 23 ಮೇ 2022 (19:58 IST)
ಯುವತಿಯನ್ನು ಪಿಸ್ತೂಲಿನಿಂದ ಬೆದರಿಸಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಓರ್ವನನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
 
ಬಿಹಾರ ಮೂಲದ ಬೆಂಗಳೂರು ನಿವಾಸಿ ಅನಿಲ್ ರವಿಶಂಕರ್ ಪ್ರಸಾದ್ ಬಂಧಿತನಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮೂರು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
 
ಆರೋಪಿಯು ವ್ಯಾಪಾರಿ ಆಗಿದ್ದು, ಈತನಿಗೆ ಸೇರಿದ ಮನೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಕಳೆದ ಮಾರ್ಚ್‍ನಿಂದ ಬಾಡಿಗೆಗೆ ವಾಸಿಸುತ್ತಿದ್ದಳು. ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಂದಿಗೆ ಮನೆಗೆ ಆಗಾಗ ಸ್ನೇಹಿತರು ಬರುತ್ತಿರುವ ಬಗ್ಗೆ ಮನೆ ಮಾಲಕ ತಗಾದೆ ತೆಗೆಯುತ್ತಿದ್ದನಂತೆ. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.
 
ಕೆಲವು ದಿನಗಳ ಬಳಿಕ ಮನೆಯಲ್ಲಿ ಯುವತಿಯ ಸ್ನೇಹಿತನೊಬ್ಬ ಉಳಿದುಕೊಂಡಿದ್ದ. ಇದನ್ನು ಗಮನಿಸಿದ ಮಾಲಕ ಮನೆಯಾಚೆ ನಿಲ್ಲಿಸಿದ್ದ ಸ್ನೇಹಿತನ ಬೈಕ್‍ಅನ್ನು ವಶಕ್ಕೆ ಪಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
 
ಇದಾದ ಬಳಿಕ ಎ.11ರಂದು ಆಕೆಯ ಮನೆಗೆ ಹೋದ ಮಾಲಕ ಮಾತನಾಡುವ ನೆಪದಲ್ಲಿ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ನಡೆದಿದ್ದ ಕೃತ್ಯದ ಬಗ್ಗೆ ಇತ್ತೀಚೆಗೆ ಪೋಷಕರ ಬಳಿ ಯುವತಿ ಹೇಳಿಕೊಂಡಿದ್ದಾಳೆ. ಆಕೆಯನ್ನು ಸಮಾಧಾನಪಡಿಸಿ ನೀಡಿದ ದೂರಿನ ಮೇರೆಗೆ ಮನೆ ಮಾಲಕನನ್ನು ಬಂಧಿಸಿರುವ ಅಶೋಕನಗರ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments