Publish Date: Thu, 28 May 2026 (09:21 IST)
Updated Date: Thu, 28 May 2026 (09:25 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಿರುವ ವದಂತಿ ನಡುವೆ ಸಿದ್ದರಾಮಯ್ಯ ಕರೆದಿರುವ ಬ್ರೇಕ್ಫಾಸ್ಟ್ ಸಭೆ ಭಾರೀ ಕುತೂಹಲವನ್ನು ಮೂಡಿಸಿದೆ.
ಇದು ಸಿದ್ದರಾಮಯ್ಯ ಆಪ್ತ ವಲಯಕ್ಕೆ ತುಂಬಾ ಕಹಿಯಾಗಿರುವ ಬ್ರೇಕ್ಫಾಸ್ಟ್ ಆಗಿರುತ್ತದೆ. ಯಾಕೆಂದರೆ ಎಲ್ಲ ಆಯಾಮದಲ್ಲೂ ಸಿದ್ದು ರಾಜೀನಾಮೆ ನೀಡುತ್ತಿರುವುದು ಪಕ್ಕಾ ಆಗಿರುತ್ತದೆ. ಆದ್ದರಿಂದ ಸಿದ್ದರಾಮಯ್ಯ ಪಾಲಿನ ಬೆಂಬಲಿಗರು, ಶಿಷ್ಯರಿಗೆ ಸಿದ್ದರಾಮಯ್ಯ ಆಯೋಜನೆ ಮಾಡಿರುವ ಈ ಬ್ರೇಕ್ಫಾಸ್ಟ್ ತುಂಬಾನೇ ಕಹಿಯಾಗಿರುತ್ತದೆ.
ಇಂದಿನ ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಮೆನುಗಿಂತ ಸಚಿವರ ಮನಸ್ಸಿನಲ್ಲಿರುವ ಅಭಿಪ್ರಾಯವೇ ಮುಖ್ಯವಾಗಿರುತ್ತದೆ. ಸಿದ್ದರಾಮಯ್ಯ ಬೆಂಬಲಿಗರು ಈಗಾಗಲೇ ಹುಲಿಯಾನ ವಿದಾಯಕ್ಕೆಅಸಮಾಧಾನವನ್ನು ಹೊರಹಾಕುತ್ತಿದ್ದಾರೆ.
ಸಿಎಂ ಕಾವೇರಿ ನಿವಾಸಕ್ಕೆ ಈಗಾಗಲೇ ಸಾಕಷ್ಟು ಸಚಿವರುಗಳು ಆಗಮಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಇದೀಗ ನಿವಾಸದ ಕಡೆ ಬರುತ್ತಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ