Publish Date: Mon, 05 Apr 2021 (12:26 IST)
Updated Date: Mon, 05 Apr 2021 (12:28 IST)
ಬೆಂಗಳೂರು : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಕಸದ ತೊಟ್ಟಿ ಆಗಿದ್ದಾರೆ ಎಂದು ಸಿದ್ಧರಾಮಯ್ಯ ಅವರಿಗೆ ಸಚಿವ ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆ ಕೆಟ್ಟು ಹೋಗಿದೆ. ಸಿದ್ದುಗೆ ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡ್ತಿನಿ. ಅಭಿವೃದ್ಧಿ ಕಾರ್ಯ ನೋಡಿ ಸಹಿಸಲು ಆಗ್ತಿಲ್ಲ. ಹೀಗಾಗಿ ಹುಚ್ಚು ಹುಚ್ಚಾಗಿ ಮಾತಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಲ್ಲಿ ನಿಮ್ಮ ಮಾತು ಯಾರೂ ಕೇಳ್ತಿಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ನೀವು ಕಸದ ತೊಟ್ಟಿ ಆಗಿದ್ದೀರಾ ಎಂದು ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.