Webdunia - Bharat's app for daily news and videos

Install App

ಪ್ರತಾಪ್ ಸಿಂಹ ವಿರುದ್ಧ ಡಾಲಿ ಧನಂಜಯ್ ಸ್ಪರ್ಧೆ: ಸಿಎಂ ಸಿದ್ದರಾಮಯ್ಯ ಹೇಳಿಕೆ

Krishnaveni K
ಮಂಗಳವಾರ, 20 ಫೆಬ್ರವರಿ 2024 (13:59 IST)
Photo Courtesy: Twitter
ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ನಟ ಡಾಲಿ ಧನಂಜಯ್ ಸ್ಪರ್ಧಿಸಲಿದ್ದಾರೆ ಎಂಬ ಊಹಾ ಪೋಹಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಡಾಲಿ ಧನಂಜಯ್ ಕೂಡಾ ಯುವ ಜನಾಂಗವನ್ನು ಆಕರ್ಷಿಸುವ ಗುಣವಿರುವ ನಟ. ಇದುವರೆಗೆ ರಾಜಕೀಯದಲ್ಲಿ ಪ್ರತ್ಯಕ್ಷವಾಗಿ ಇರದೇ ಇದ್ದರೂ ಡಾಲಿ ಧನಂಜಯ್ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಅಭಿಮಾನದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಮೈಸೂರು ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಸುದ್ದಿ ಹಬ್ಬಿತ್ತು.

ಪ್ರತಾಪ್ ಸಿಂಹ ಯೂಥ್ ಐಕಾನ್ ಇಮೇಜ್ ಇರುವ ನಾಯಕ. ಅವರನ್ನು ಹಣಿಯಲು ಅಂತಹದ್ದೇ ಪ್ರಬಲ ನಾಯಕನ ಅಗತ್ಯವಿದೆ. ಹೀಗಾಗಿ ಕಾಂಗ್ರೆಸ್ ಡಾಲಿ ಧನಂಜಯ್ ಅವರನ್ನು ಕಣಕ್ಕಿಳಿಸಲಿದೆ ಎನ್ನಲಾಗಿತ್ತು. ಇತ್ತೀಚೆಗೆ ಬಜೆಟ್ ನಲ್ಲೂ ಸಿಎಂ ಸಿದ್ದರಾಮಯ್ಯ ಡೇರ್ ಡೆವಿಲ್ ಮುಸ್ತಫಾ ಸಿನಿಮಾದ ಡೈಲಾಗ್ ಒಂದನ್ನು ಹೇಳಿದ್ದರು. ಜೊತೆಗೆ ಇತ್ತೀಚೆಗೆ ಡಾಲಿ ಧನಂಜಯ್ ಅವರನ್ನು ಭೇಟಿ ಕೂಡಾ ಆಗಿದ್ದರು. ಹೀಗಾಗಿ ಈ ಸುದ್ದಿ ಮುನ್ನೆಲೆಗೆ ಬಂದಿತ್ತು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನನಗೆ ಈ ಬಗ್ಗೆ ಇದುವರೆಗೆ ಅಂತಹ ಯಾವುದೇ ಸುದ್ದಿ ಬಂದಿಲ್ಲ. ಯಾರೂ ನನ್ನ ಜೊತೆ ಈ ಬಗ್ಗೆ ಚರ್ಚಿಸಿಲ್ಲ ಎಂದಿದ್ದಾರೆ. ಆ ಮೂಲಕ ಸದ್ಯಕ್ಕೆ ಈ ಸುದ್ದಿಗೆ ಬ್ರೇಕ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments