ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

ಕೃಷ್ಣವೇಣಿ ಕೆ
ಬುಧವಾರ, 27 ಮೇ 2026 (12:44 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೀರಾ ಎಂದು ಮಾಧ್ಯಮಗಳು ಇಂದು ಪ್ರಶ್ನೆ ಮಾಡಿದಾಗ ಸಿದ್ದರಾಮಯ್ಯನವರು ನೀಡಿದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸುವಂತಿದೆ.

ನಿನ್ನೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸುದೀರ್ಘ ಮಾತುಕತೆ ನಡೆಸಿದ ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ. ಇದರ ನಡುವೆ ಇಂದು ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ಸಿಎಂ ಬದಲಾವಣೆ ವಿಚಾರ ಸುದ್ದಿಯಲ್ಲಿರುವಾಗಲೇ ಇಂದು ಜವಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮಗಳು ಅವರನ್ನು ಸುತ್ತುವರೆದಿದ್ದು ರಾಜೀನಾಮೆ ನೀಡ್ತೀರಾ ಸಾರ್ ಎಂದು ಪ್ರಶ್ನೆ ಮಾಡಿವೆ.

ಇದಕ್ಕೆ ಉತ್ತರಿಸಿರುವ ಅವರು ‘ಎಲ್ಲದಕ್ಕೂ ನಾಳೆ ಉತ್ತರ ನೀಡುತ್ತೇನೆ. ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ ಮುಕ್ತವಾಗಿ ಮಾತನಾಡುತ್ತೇನೆ’ ಎಂದಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಹುಟ್ಟಿಸಿದೆ. ವಿಶೇಷವೆಂದರೆ ಇದುವರೆಗೆ ಇಂಥಾ ಪ್ರಶ್ನೆ ಕೇಳಿದಾಗ ಅವರು ನಾನು ರಾಜೀನಾಮೆ ನೀಡಲ್ಲ ಎಂದೇ ಹೇಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ನಾಳೆ ಹೇಳುವುದಾಗಿ ಹೇಳಿರುವುದು ಕುತೂಹಲ ಹೆಚ್ಚಿಸಿದೆ. ಹೀಗಾಗಿ ನಾಳೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ತೀರ್ಮಾನವಾಗುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಮುಂದಿನ ಸುದ್ದಿ
Show comments