Webdunia - Bharat's app for daily news and videos

Install App

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

Krishnaveni K
ಗುರುವಾರ, 8 ಜನವರಿ 2026 (10:16 IST)
ಹಾವೇರಿ: ಇಷ್ಟು ದಿನ ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಹಾವೇರಿ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಎದುರೇ ಕುರ್ಚಿ ಬಿಟ್ಟು ಕೊಡುವ ಬಗ್ಗೆ ಶಾಕಿಂಗ್ ಮಾತುಗಳನ್ನಾಡಿದ್ದಾರೆ.

ಮೊನ್ನೆಯಷ್ಟೇ ಸುದೀರ್ಘ ಕಾಲ ಮುಖ್ಯಮಂತ್ರಿ ಎಂದು ದೇವರಾಜ ಅರಸು ದಾಖಲೆ ಮುರಿದಿದ್ದ ಸಿದ್ದರಾಮಯ್ಯ ನಿನ್ನೆ ಹಾವೇರಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಸಿಎಂ ಕುರ್ಚಿ ಬಗ್ಗೆ ಮಾರ್ಮಿಕವಾಗಿ ಮಾತನಾಡಿ ಶಾಕ್ ಕೊಟ್ಟಿದ್ದಾರೆ. ವಿಶೇಷವೆಂದರೆ ಈ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಕೂಡಾ ಇದ್ದರು.

ನಾನು ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದೇನೆ. ಆದರೆ ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ನನಗಂತೂ ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.

‘ಜನಾಶೀರ್ವಾದಿಂದ ಇಲ್ಲಿಯವರೆಗೂ ಬಂದಿದ್ದೇನೆ. ಮುಂದೆ ಎಷ್ಟು ದಿನ ಇರ್ತೇನೋ ಗೊತ್ತಿಲ್ಲ. ಹೈಕಮಾಂಡ್ ಹೇಳುವವರೆಗೂ ಮುಂದುವರಿಯುತ್ತೇನೆ. ಆದರೆ ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿಯಿದೆ’ ಎಂದಿದ್ದಾರೆ. ಆ ಮೂಲಕ ಸಿಎಂ ಕುರ್ಚಿ ಬಗ್ಗೆ ಡಿಕೆಶಿ ಎದುರೇ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಾಲಕನಾಗಿ ಕೊನೆಯ ದಿನ.. ಬಸ್ ಗೆ ಪ್ರದಕ್ಷಿಣೆ ಬಂದು ನಮಸ್ಕರಿಸಿದ ಕೇರಳ ಸಾರಿಗೆ ಚಾಲಕ: ಭಾವುಕ ವಿಡಿಯೋ

ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ : ಬಿ.ವೈ. ವಿಜಯೇಂದ್ರ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಮುಂದಿನ ಸುದ್ದಿ
Show comments