Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಹೇಳಿಕೆ ನೀಡಿದ್ದು, ಸಿದ್ದು ಲಿಂಗಾಯತರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಚುನಾವಣೆ ಆಯೋಗಕ್ಕೆ ದೂರು ಕೊಡಲಾಗಿದೆ.. ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ.. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದ್ರು.. ಕಾಂಗ್ರೆಸ್ನವರಿಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಾಯತರ ಮೇಲೆ ಪ್ರೀತಿ ಇದ್ರೆ ಲಿಂಗಾಯತ ಮುಖ್ಯಮಂತ್ರಿ ಮಾಡ್ತೀವಿ ಎಂದು ಹೇಳಲಿ ನೋಡೋಣ ಎಂದು ಸವಾಲ್ ಹಾಕಿದ್ರು.. ನಾವು ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ, ಚುನಾವಣೆಯ ನಂತರ ಲೀಡರ್ಶಿಪ್ ಡಿಸೈಡ್ ಮಾಡ್ತೀವಿ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ರು. ಇನ್ನು ರಾಹುಲ್ ಗಾಂಧಿ ಆಪರೇಶನ್ ಕಮಲ ಮಾಡೋಕೆ ಬಿಡಲ್ಲ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಹೌದು ರಾಹುಲ್ ಗಾಂಧಿ ಸರಿಯಾಗಿ ಹೇಳಿದ್ದಾರೆ. ನಾವು ಆಪರೇಷನ್ ಕಮಲ ಮಾಡುವುದಿಲ್ಲ.. ನಾವೇ ಬಹುಮತದಿಂದ ಅಧಿಕಾರಕ್ಕೆ ಬರ್ತೀವಿ ಎಂದು ತಿಳಿಸಿದ್ರು.