Webdunia - Bharat's app for daily news and videos

Install App

ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ: ವಿಜಯೇಂದ್ರ

Sampriya
ಸೋಮವಾರ, 27 ಜನವರಿ 2025 (17:18 IST)
ಬೆಂಗಳೂರು: ಮೈಸೂರಿನ ಮುಡಾ ಹಗರಣದಲ್ಲಿ ಬಿ ರಿಪೋರ್ಟ್‌ ಹಾಕಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದ ಸಿಎಂ  ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಲೋಕಾಯುಕ್ತ  ಸಂಸ್ಥೆಯ ತನಿಖೆ ಏನು ಎಂಬುದನ್ನು ಮಾಧ್ಯಮಗಳೇ ತೋರಿಸಿವೆ. ಸಿದ್ದರಾಮಯ್ಯ ಅವರ ಬಾಮೈದ ನೋಟಿಸ್‌ ಕೊಡದೇ ಇದ್ದರೂ ರಾತ್ರಿ 8 ರಿಂದ 9 ಗಂಟೆ ವೇಳೆಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು ಎಂದು ಹೇಳಿದರು.

ಈ ಮೂಲಕ ಸಿಎಂ ಕುಟುಂಬಕ್ಕೆ ಎಷ್ಟು ಮುಕ್ತ ವ್ಯವಸ್ಥೆ ಇತ್ತೆಂಬುದು ಬಹಿರಂಗವಾಗಿದೆ. ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ಪಾದಯಾತ್ರೆ ಮಾಡಿದ್ದೆವು. ನಮ್ಮ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಯವರ ಪತ್ನಿ 14 ನಿವೇಶಗಳನ್ನು ಹಿಂತಿರಗಿಸುತ್ತೇವೆ ಎಂದು ರಾತ್ರೋರಾತ್ರಿ ಮುಡಾಕ್ಕೆ ಪತ್ರ ಬರೆದಿದ್ದರು. ಆ ಪತ್ರದ ಮೂಲಕ ಹಗರಣದಿಂದ ಹೊರಕ್ಕೆ ಬಂದ ಭ್ರಮೆಯಲ್ಲಿ ಮುಖ್ಯಮಂತ್ರಿಗಳೂ ಇದ್ದರು ಎಂದರು.

ಇದೀಗ ಸಚಿವ ಬೈರತಿ ಸುರೇಶ್‌, ಸಿಎಂ ಪತ್ನಿಗೆ ಇ.ಡಿ ನೋಟಿಸ್‌ ಕೊಟ್ಟಿದೆ. ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments